Webdunia - Bharat's app for daily news and videos

Install App

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

Krishnaveni K
ಮಂಗಳವಾರ, 20 ಮೇ 2025 (09:06 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆರಾಯ ಇಂದು ಬೆಳ್ಳಂ ಬೆಳಿಗ್ಗೆಯೇ ಬಂದಿದ್ದಾನೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದು ಕಚೇರಿಗೆ ಹೋಗುವವರು ಪರದಾಡುವಂತಾಗಿದೆ.

ಬೆಂಗಳೂರಿಗೆ ಈ ವಾರ ನಿರಂತರ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ವರದಿ ನೀಡಿತ್ತು. ನಗರಕ್ಕೆ ಇಂದೂ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ವಿಪರೀತ ಮಳೆಯಿಂದಾಗಿ ಬೆಳಿಗ್ಗೆಯೇ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು.

ಬಹುತೇಕ ರಸ್ತೆಗಳಲ್ಲಿ ನೀರು ನಿಂತು ಸ್ವಿಮ್ಮಿಂಗ್ ಪೂಲ್ ನಂತಾಗಿದೆ. ನಿನ್ನೆ ಮಳೆಯಿಂದಾಗಿ ಓರ್ವ ಮಹಿಳೆ ಸಾವನ್ನಪ್ಪಿದ ವರದಿಯಾಗಿತ್ತು. ಹೀಗಾಗಿ ಹೊರಗೆ ಹೋಗುವವರು ಎಚ್ಚರಿಕೆ ವಹಿಸಬೇಕಾಗುತ್ತದೆ.

ಆದಷ್ಟು ಕಚೇರಿಗಳಿಗೆ, ಕೆಲಸಕ್ಕೆ ತೆರಳುವವರು ಎಂದಿಗಿಂತ ಮುಂಚಿತವಾಗಿಯೇ ಹೊರಡುವುದು ಉತ್ತಮ. ಹೆಚ್ಚಾಗಿ ಐಟಿ ಬಿಟಿ ಉದ್ಯೋಗಿಗಳು ತೆರಳುವ ಮಾನ್ಯತಾ ಟೆಕ್ ಪಾರ್ಕ್, ಸಿಲ್ಕ್ ಬೋರ್ಡ್ ಜಂಕ್ಷನ್ ಸೇರಿದಂತೆ ಪ್ರಮುಖ ರಸ್ತೆಗಳು ನೀರಿನಿಂದ ಆವೃತವಾಗಿದೆ. ಹೀಗಾಗಿ ಅವಕಾಶವಿದ್ದಲ್ಲಿ ವರ್ಕ್ ಫ್ರಂ ಹೋಂ ತೆಗೆದುಕೊಳ್ಳುವುದು ಉತ್ತಮ. ಇದರಿಂದ ಅನಗತ್ಯ ಅಪಾಯ ಮೈಮೇಲೆಳೆದುಕೊಳ್ಳುವುದೂ ತಪ್ಪುತ್ತದೆ. ಈ ವಾರವಿಡೀ ಈ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments