Webdunia - Bharat's app for daily news and videos

Install App

Benaluru Rains: ನಾಳೆಯೂ ಶಾಲೆಗಳಿಗೆ ರಜೆ, ಇಲ್ಲಿದೆ ಜಿಲ್ಲಾಧಿಕಾರಿಗಳ ಆದೇಶದ ವಿವರ

Krishnaveni K
ಮಂಗಳವಾರ, 22 ಅಕ್ಟೋಬರ್ 2024 (20:23 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನಾಳೆಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಈ ಬಾರಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ.

ಭಾರೀ ಮಳೆ ನಿಮಿತ್ತ ನಿನ್ನೆ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಇಂದು ಬೆಳಿಗ್ಗಿನ ಅವಧಿಯಲ್ಲಿ ವರುಣ ಬಿಡುವು ನೀಡಿದ್ದರಿಂದ ಎಂದಿನಂತೆ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸಿದ್ದವು. ಆದರೆ ಅಪರಾಹ್ನದ ನಂತರ ಭಾರೀ ಮಳೆಯಾಗಿದ್ದು, ಮಕ್ಕಳು ಮನೆಗೆ ತೆರಳುವುದಕ್ಕೂ ಕಷ್ಟಪಡುವಂತಾಗಿತ್ತು.

ಇಂದು ಸುರಿದ ಭಾರೀ ಮಳೆಯಿಂದ ಮತ್ತಷ್ಟು ಅನಾಹುತಗಳಾಗಿದೆ. ಜೊತೆಗೆ ನಾಳೆಯೂ ಮಳೆಯ ಮುನ್ಸೂಚನೆ ಇರುವ ಕಾರಣ ಬೆಂಗಳೂರು ನಗರ ಡಿಸಿ ಎಲ್ಲಾ ಖಾಸಗಿ ಮತ್ತು ಸರ್ಕಾರೀ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಶಾಲೆಗಳು ಮತ್ತು ಅಂಗನವಾಡಿಗಳಿಗೆ ನಾಳೆ ರಜೆ ನೀಡಲಾಗಿದೆ.

ಆದರೆ ಕಾಲೇಜುಗಳಿಗೆ ರಜೆಯಿಂದ ವಿನಾಯ್ತಿ ನೀಡಲಾಗಿದೆ. ಆದರೆ ನಿಗದಿಯಾಗಿದ್ದ ಪರೀಕ್ಷೆಗಳು ಮುಂದೂಡಿಕೆಯಾಗಲಿದೆ. ಈಗಾಗಲೇ ಮಳೆಯಿಂದಾಗಿ ನಷ್ಟವಾಗಿರುವ ತರಗತಿಗಳನ್ನು ಮುಂದಿನ ದಿನಗಳಲ್ಲಿ ಶನಿವಾರ ಪೂರ್ತಿ ದಿನ ಮತ್ತು ಭಾನುವಾರ ಹೆಚ್ಚುವರಿ ಕ್ಲಾಸ್ ಮಾಡಿ ಭರ್ತಿ ಮಾಡಬೇಕು ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

ವಾಯುಭಾರ ಕುಸಿತದಿಂದಾಗಿ ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಇಂದು ರಾತ್ರಿ ಮಳೆ ಪೀಡಿತ ಬೆಂಗಳೂರಿನ ಕೆಲವು ಪ್ರದೇಶಗಳಿಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು ಪ್ರಾಣ ಹಾನಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಮುಂದಿನ ಸುದ್ದಿ
Show comments