Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಮನೆ ಸೇರುವ ಮುನ್ನ ಈ ವಿಚಾರಗಳ ಬಗ್ಗೆ ಎಚ್ಚರಿಕೆಯಿರಲಿ

Krishnaveni K
ಮಂಗಳವಾರ, 22 ಅಕ್ಟೋಬರ್ 2024 (15:51 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಳಿಗ್ಗೆ ಬಿಡುವು ನೀಡಿದ್ದ ಮಳೆ ಇದೀಗ ಅಪರಾಹ್ನ ಮತ್ತೆ ಪ್ರತ್ಯಕ್ಷನಾಗಿದ್ದಾನೆ. ಮಧ್ಯಾಹ್ನದ ನಂತರ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಕಚೇರಿ ಬಿಟ್ಟು ಮನೆ ಸೇರುವ ಮುನ್ನ ಎಚ್ಚರಿಕೆ ವಹಿಸುವುದು ಸೂಕ್ತ.

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯೂ ಭಾರೀ ಮಳೆಯಾಗಿತ್ತು. ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವು ರಸ್ತೆಗಳು, ಮನೆಗಳು ಜಲಾವೃತವಾಗಿದೆ. ಸಕಾಲದಲ್ಲಿ ಮಳೆಯಾಗದೇ ಈಗ ಅಸಮಯದಲ್ಲಿ ಮಳೆಯಾಗುತ್ತಿರುವುದರಿಂದ ಜನ ಪರದಾಡುವಂತಾಗಿದೆ.

ಇಂದು ಮಧ್ಯಾಹ್ನದಿಂದ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಮಳೆ ಬಿಡುವು ನೀಡಿದ್ದರಿಂದ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿವೆ.

ಆದರೆ ಶಾಲಾ ಮಕ್ಕಳು ಮನೆಗೆ ತೆರಳುವ ವೇಳೆ ಭಾರೀ ಮಳೆಯಾಗಿದ್ದು ಮಕ್ಕಳನ್ನು ಕರೆದೊಯ್ಯುವುದೇ ಕಷ್ಟವಾಗಿದೆ. ಮಳೆಯಿಂದಾಗಿ ರಸ್ತೆ, ಚರಂಡಿ ಎಲ್ಲಾ ಕಡೆ ನೀರೋ ನೀರು ಎನ್ನುವ ಪರಿಸ್ಥಿತಿಯಿದೆ. ಹೀಗಾಗಿ ಮಕ್ಕಳನ್ನು ಮನೆಗೆ ಕರೆದೊಯ್ಯುವಾಗ ಎಚ್ಚರಿಕೆಯಿರಲಿ. ಕಚೇರಿಯಿಂದ ಮನೆಗೆ ತೆರಳುವವರೂ ಆದಷ್ಟು ಮಳೆ ಬಿಡುವು ಇರುವ ಸಮಯದಲ್ಲೇ ತೆರಳುವುದು ಉತ್ತಮ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೊಡ್ಡ ಮತಗಳ್ಳ, ಅವರನ್ನು ಓಡಿಸಬೇಕು ಎಂದ ಮಲ್ಲಿಕಾರ್ಜುನ ಖರ್ಗೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ಮುಂದಿನ ಸುದ್ದಿ
Show comments