ಏಕವಚನದಲ್ಲಿ ಮಾತನಾಡಿಸಿದ್ದಕ್ಕೆ ಮರ್ಡರ್

Webdunia
ಸೋಮವಾರ, 30 ಜನವರಿ 2017 (10:24 IST)
ಏಕವಚನದಲ್ಲಿ ಮಾತನಾಡಿಸಿದ್ದಕ್ಕೆ ಗ್ರಾಹಕನೇ ವ್ಯಾಪಾರಿಯನ್ನು ಕೊಲೆಗೈದ ಹೇಯ ಘಟನೆ ರವಿವಾರ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. 
ಹಳೆ ಬೈಯ್ಯಪ್ಪನ ಹಳ್ಳಿಯ ಅಂಬೇಡ್ಕರ್ ನಗರದ ಬೇಕರಿಯೊಂದರಲ್ಲಿ ಈ ಕೃತ್ಯ ನಡೆದಿದ್ದು, ಮೃತನನ್ನು ಅದೇ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮುರಳಿ (48) ಎಂದು ಗುರುತಿಸಲಾಗಿದೆ. 
 
ರಾತ್ರಿ 12.15 ರ ಸುಮಾರಿಗೆ ಜಯರಾಜ್ ಎಂಬಾತ ಬೇಕರಿಗೆ ಆಗಮಿಸಿದ್ದು, ವ್ಯಾಪಾರಿ ಮುರಳಿ ಬಳಿ ಕೆಲ ತಿನಿಸನ್ನು ಕೇಳಿದ್ದಾನೆ. ಈ ಸಂದರ್ಭದಲ್ಲಿ ಮುರಳಿ ಏಕವಚನದಲ್ಲಿ ಮಾತನಾಡಿದ್ದರಿಂದ ಕೆರಳಿದ ಜಯರಾಜ್ ಜಗಳಕ್ಕೀಳಿದಿದ್ದಾನೆ. ಜಗಳ ತಾರಕಕ್ಕೇರುತ್ತಿದ್ದಂತೆ ಜಯರಾಜ್ ಅಲ್ಲೇ ಇದ್ದ ಚಾಕುವಿನಿಂದ ಮುರಳಿಗೆ ಮನಬಂದಂತೆ ಇರಿದು ಪರಾರಿಯಾಗಿದ್ದಾನೆ. 
 
ಆರೋಪಿ ಜಯರಾಜ್ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. 
 
ಬೈಯ್ಯಪ್ಪನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments