Select Your Language

Notifications

webdunia
webdunia
webdunia
webdunia

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

RCB fans

Krishnaveni K

ಬೆಂಗಳೂರು , ಶುಕ್ರವಾರ, 6 ಜೂನ್ 2025 (15:03 IST)
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ನಿಮ್ಮ ಬೇಜವಾಬ್ಧಾರಿ ಕಾರಣ ಎಂಬಂತೆ ಬಿಂಬಿಸಲು ಹೊರಟ ರಾಜ್ಯ ಸರ್ಕಾರಕ್ಕೆ ಕೆಎಸ್ ಸಿಎ ತಿರುಗೇಟು ನೀಡಿದೆ. ಸರ್ಕಾರದ ವಿರುದ್ಧವೇ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಘಟನೆ ಬಗ್ಗೆ ನಿನ್ನೆಯಷ್ಟೇ ಕೆಎಸ್ ಸಿಎ ಮತ್ತು ಆರ್ ಸಿಬಿ ಫ್ರಾಂಚೈಸಿ ವಿರುದ್ಧ ವಿವಿಧ ಸೆಕ್ಷನ್ ಗಳಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಇದೀಗ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಕೆಎಸ್ ಸಿಎ, ಸಂಭ್ರಮಾಚರಣೆಗೆ ಕರೆ ಕೊಟ್ಟಿದ್ದೇ ಸರ್ಕಾರ. ಆದರೆ ಈಗ ಜನರ ಆಕ್ರೋಶ ತಪ್ಪಿಸಲು ನಮ್ಮ ಮೇಲೆ ಆರೋಪ ಮಾಡುತ್ತಿದೆ ಎಂದು ಆರೋಪಿಸಿದೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನ ಮಾಡುವ ಯೋಜನೆ ಸರ್ಕಾರದ್ದೇ ಆಗಿತ್ತು. ಈಗ ಘಟನೆಯ ಹೊಣೆಯನ್ನು ಕೆಎಸ್ ಸಿಎ ಮೇಲೆ ಹಾಕಲು ನೋಡಲಾಗುತ್ತಿದೆ. ಆದರೆ ಪೊಲೀಸರಿಂದ ರಕ್ಷಣೆ ಕೊಡಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕೆಎಸ್ ಸಿಎ ರಿಟ್ ಅರ್ಜಿಯಲ್ಲಿ ಹೇಳಿದೆ.

ಪೊಲೀಸರನ್ನು ಅಮಾನತು ಮಾಡಿ ಸ್ವತಃ ಸಿಎಂ ಅವರೇ ವೈಫಲ್ಯವನ್ನು ಒಪ್ಪಿಕೊಂಡಿದ್ದಾರೆ. ಇದರ ಮೇಲೆ ಕೆಎಸ್ ಸಿಎ ಅಧಿಕಾರಿಗಳನ್ನು ಬಂಧಿಸಲು ಮಾಧ್ಯಮಗಳ ಮೂಲಕ ಆದೇಶ ನೀಡಿದ್ದಾರೆ ಎಂದು ಕೆಎಸ್ ಸಿಎ ಆರೋಪಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Bengaluru Stampede, ನಾನು ರಾಜಕೀಯ ಮಾಡುತ್ತಿಲ್ಲ, ಕ್ರಮ ಕೈಗೊಂಡಿದ್ದೇನೆ: ಸಿಎಂ ಸಿದ್ದರಾಮಯ್ಯ