ಬೆಂಗಳೂರು: ಜೂನ್ 4 ರಂದು 11 ಜೀವಗಳನ್ನು ಬಲಿ ಪಡೆದ ಎಂ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಪರಿಹಾರವನ್ನು ನಿರಾಕರಿಸಿದೆ.
ಅವರ ಅರ್ಜಿಯ ಮೇಲಿನ ಆದೇಶವನ್ನು ನ್ಯಾಯಾಲಯವು ಜೂನ್ 11 ರವರೆಗೆ ಕಾಯ್ದಿರಿಸಿದೆ.
ಜೂನ್ 6 ರಂದು ಸೋಸಲೆ ಅವರನ್ನು ಕೇಂದ್ರ ಅಪರಾಧ ವಿಭಾಗವು ದುಬೈಗೆ ತೆರಳಲು ಹೊರಟಿದ್ದಾಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿತು.
ಜೂನ್ 6 ರಂದು ಮುಂಜಾನೆ ತನ್ನ ಬಂಧನದ ಕಾನೂನುಬದ್ಧತೆಯನ್ನು ಸೋಸಲೆ ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಪೊಲೀಸ್ ಕ್ರಮವು ರಾಜಕೀಯ ನಿರ್ದೇಶನಗಳಿಂದ ಪ್ರಭಾವಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠವು ನಾಳೆ ಮಧ್ಯಂತರ ಆದೇಶವನ್ನು ಪ್ರಕಟಿಸಲು ನಿರ್ಧರಿಸುವ ಮೊದಲು ಸೋಸಲೆ ಅವರ ವಕೀಲರು ಮತ್ತು ರಾಜ್ಯ ಸರ್ಕಾರದಿಂದ ವಾದಗಳನ್ನು ಆಲಿಸಿತು.