Bengaluru Water Crisis: ನೀರಿನ ಅಭಾವದಿಂದ ಮತ್ತೆ ಶುರುವಾಯ್ತು ಆನ್ ಲೈನ್ ಕ್ಲಾಸ್

Krishnaveni K
ಶುಕ್ರವಾರ, 8 ಮಾರ್ಚ್ 2024 (10:25 IST)
ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ಅಭಾವ ತಾರಕಕ್ಕೇರಿದ್ದು ಇದರಿಂದಾಗಿ ಕೆಲವು ಶಿಕ್ಷಣ ಸಂಸ್ಥೆಗಳು ಹಿಂದಿನಂತೆ ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ.

ಶಾಲೆಗಳು ಈಗಾಗಲೇ ಕೊನೆಯ ಹಂತ ತಲುಪಿದೆ. ಆದರೆ ಕೆಲವು ಟ್ಯುಟೋರಿಯಲ್ಸ್, ಕೋಚಿಂಗ್ ಸೆಂಟರ್ ಗಳು, ಕಾಲೇಜುಗಳು ಜಾರಿಯಲ್ಲಿದೆ. ಆದರೆ ಕಾಲೇಜಿನಲ್ಲಿ ಏಕಾಏಕಿ ನೂರಾರು ವಿದ್ಯಾರ್ಥಿಗಳು ಹಾಜರಾದರೆ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ಕೆಲವು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿವೆ.

ಈ ಮೊದಲು ಕೊರೋನಾ ಸಂದರ್ಭದಲ್ಲಿ ಎಲ್ಲಾ ಶಾಲಾ, ಕಾಲೇಜುಗಳು ಆನ್ ಲೈನ್ ಶಿಕ್ಷಣಕ್ಕೆ ಮೊರೆ ಹೋಗಿದ್ದವು. ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಮನೆಯಿಂದಲೇ ಪಾಠ ಕೇಳುತ್ತಿದ್ದರು. ಹೊರಗಡೆ ಬಂದರೆ ರೋಗದ ಭಯವಿತ್ತು. ಆದರೆ ಇಂದು ನೀರಿನ ಅಭಾವ ಅನಿವಾರ್ಯವಾಗಿ ಆನ್ ಲೈನ್ ಗೆ ಮೊರೆ ಹೋಗುವಂತೆ ಮಾಡಿದೆ.

ಬೆಂಗಳೂರಿನ ಹಲವೆಡೆ ನೀರಿನ ತೀವ್ರ ಅಭಾವ ಎದುರಾಗಿದೆ. ಬಡವರು ಟ್ಯಾಂಕರ್ ಖರೀದಿಸಿ ನೀರು ತರಿಸಿಕೊಳ‍್ಳಲೂ ಆಗದಷ್ಟು ಬೆಲೆ ಗಗನಕ್ಕೇರಿದೆ. ಹೀಗಿರುವಾಗ ಕೆಲವೆಡೆ ಶಿಕ್ಷಣ ಸಂಸ್ಥೆಗಳು ಅನಿವಾರ್ಯವಾಗಿ ಅವಧಿಗೂ ಮುನ್ನವೇ ಬಾಗಿಲು ಮುಚ್ಚುವ ಪರಿಸ್ಥಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments