Webdunia - Bharat's app for daily news and videos

Install App

Bengaluru Water Crisis: ಅಪಾರ್ಟ್ ಮೆಂಟ್ ಗಳಲ್ಲಿ ಟಿಶ್ಯೂ, ಆಸ್ಪತ್ರೆಗಳಲ್ಲೂ ನೀರಿಲ್ಲ

Krishnaveni K
ಮಂಗಳವಾರ, 19 ಮಾರ್ಚ್ 2024 (13:06 IST)
ಬೆಂಗಳೂರು: ಬೆಂಗಳೂರಿನ ಜಲಕ್ಷಾಮ ತೀವ್ರಗೊಂಡಿದ್ದು, ಅಪಾರ್ಟ್ ಮೆಂಟ್ ಗಳಲ್ಲಿ ನೀರು ಪೂರೈಕೆ ಮಾಡಲಾಗದೇ ಟಾಯ್ಲೆಟ್ ಪೇಪರ್ ಗಳನ್ನು ಬಳಕೆ ಮಾಡುವ ಪರಿಸ್ಥಿತಿ ಎದುರಾಗಿದೆ. ಜೊತೆಗೆ ಆಸ್ಪತ್ರೆಗಳಲ್ಲೂ ನೀರಿಲ್ಲದೇ ರೋಗಿಗಳು ಪರದಾಡುವಂತಾಗಿದೆ.

ಬೆಂಗಳೂರಿನ ಜನ ಬಹುತೇಕ ಕಡೆ ಟ್ಯಾಂಕರ್ ನೀರನ್ನು ತರಿಸಿಕೊಳ್ಳುತ್ತಿದ್ದಾರೆ. ಆದರೆ ಬೇಡಿಕೆ ಹೆಚ್ಚಿರುವುದರಿಂದ ಅದೂ ಸಿಗುವುದು ಕಷ್ಟವಾಗುತ್ತಿದೆ. ಅಗತ್ಯಕ್ಕೆ ಬೇಕಾದಷ್ಟು ನೀರು ಸಿಗದೇ ಜನ ದುಬಾರಿ ಹಣ ಖರ್ಚು ಮಾಡಿಯಾದರೂ ಟ್ಯಾಂಕರ್ ತರಿಸಿಕೊಳ್ಳುತ್ತಿದ್ದಾರೆ.

ಈ ನಡುವೆ ಕೆಲವು ದೊಡ್ಡ ಅಪಾರ್ಟ್ ಮೆಂಟ್ ಗಳಲ್ಲಿ ಶೌಚಾಲಯ ಬಳಕೆಗೂ ನೀರಿಲ್ಲದೇ ವಿದೇಶೀಯರಂತೇ ಟಾಯ್ಲೆಟ್ ಪೇಪರ್ ಬಳಕೆ ಮಾಡಲಾಗುತ್ತಿದೆ. ಬೇಸಿಗೆಯ ಉರಿಬಿಸಿಲು ಹೆಚ್ಚಾಗುತ್ತಿದ್ದು, ನೀರಿಲ್ಲದೇ ಟಾಯ್ಲೆಟ್ ಪೇಪರ್ ಬಳಸುವ ಅನಿವಾರ್ಯ ಸ್ಥಿತಿಗೆ ಜನರು ತಲುಪಿದ್ದಾರೆ.

ಅಷ್ಟೇ ಅಲ್ಲ, ಆಸ್ಪತ್ರೆಗಳಲ್ಲೂ ನೀರಿಗೆ ಹಾಹಾಕಾರವಾಗಿದೆ. ಈಗಾಗಲೇ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಸರ್ಕಾರಕ್ಕೆ ನೀರು ಪೂರೈಸುವಂತೆ ಮೊರೆ ಹೋಗಿದೆ. ನೀರಿಲ್ಲದೇ ರೋಗಿಗಳನ್ನು ಆಸ್ಪತ್ರೆಯಲ್ಲೇ ಇರಿಸಿಕೊಂಡು ಚಿಕಿತ್ಸೆ ನೀಡಲು ಕಷ್ಟವಾಗುತ್ತಿದೆ ಎಂಬುದು ಆಸ್ಪತ್ರೆಗಳ ಅಳಲು.

ಶಾಲೆಗಳಲ್ಲೂ ಇದೇ ಪರಿಸ್ಥಿತಿಯಾಗಿದೆ. ಇದೀಗ ವರ್ಷದ ಅಂತ್ಯವಾಗುತ್ತಿದ್ದರೂ ಈ ತಿಂಗಳಿಡೀ ನಿಭಾಯಿಸಲೇಬೇಕಾಗಿದೆ. ಅತ್ತ ಕಾಲೇಜುಗಳಲ್ಲೂ ವಿದ್ಯಾರ್ಥಿಗಳ ಅಗತ್ಯಕ್ಕೆ ನೀರು ಪೂರೈಸಲಾಗುತ್ತಿಲ್ಲ. ಕುಡಿಯುವ ನೀರಿಗಾಗಿ ಖಾಸಗಿ ವ್ಯಾಟರ್ ಕ್ಯಾನ್ ಗಳ ಮೊರೆ ಹೋಗಬೇಕಾಗಿಬಂದಿದೆ. ಸರ್ಕಾರ ತಕ್ಷಣವೇ ಇಂತಹ ಅಗತ್ಯ ಸ್ಥಳಗಳಿಗೆ ನೀರು ಪೂರೈಸುವ ಕೆಲಸ ಮಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments