Bengaluru Water price: ಕಳೆದ ವಾರ ಹಾಲಿನ ಬರೆ, ಈಗ ಬೆಂಗಳೂರಿಗೆ ನೀರಿನ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ನೋಡಿ

Krishnaveni K
ಬುಧವಾರ, 9 ಏಪ್ರಿಲ್ 2025 (15:06 IST)
ಬೆಂಗಳೂರು: ಕರ್ನಾಟಕ ಬೆಲೆ ಏರಿಕೆಗಳ ಪಟ್ಟಿಗೆ ಈಗ ನೀರು ಕೂಡಾ ಅಧಿಕೃತವಾಗಿ ಸೇರ್ಪಡೆಯಾಗಿದೆ. ಕಳೆದ ವಾರ ಹಾಲಿನ ಬೆಲೆ ಏರಿಕೆ ಬರೆಯಾದರೆ ಈ ವಾರ ನೀರಿನ ಬರೆ ಸಿಕ್ಕಿದೆ.

ಬೆಂಗಳೂರಿನಲ್ಲಿ ನೀರಿನ ದರ ಏರಿಕೆಯಾಗಲಿದೆ ಎಂದು ಕಳೆದ ಹಲವು ದಿನಗಳಿಂದ ಸುದ್ದಿಯಿತ್ತು. ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲೇ ಮಾಹಿತಿ ನೀಡಿದ್ದರು. ಹೀಗಾಗಿ ನೀರಿನ ದರ ಏರಿಕೆ ನಿರೀಕ್ಷಿತವಾಗಿತ್ತು.

ಆದರೆ ಹಾಲು, ವಿದ್ಯುತ್ ದರ ಏರಿಕೆ ಬಳಿಕ ಈಗ ನೀರಿನ ದರ ಏರಿಕೆಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಈಗ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದಾರೆ. ಡೊಮೆಸ್ಟಿಕ್ ಕನೆಕ್ಷನ್ ಗೆ ಪ್ರತೀ ಲೀಟರ್ ಗೆ 1 ಪೈಸೆಯಷ್ಟು ಹೆಚ್ಚಳವಾಗಲಿದೆ ಎಂದು ಖಚಿತಪಡಿಸಿದ್ದಾರೆ.

ವಿವಿಧ ಸ್ಲ್ಯಾಬ್ ಗಳಲ್ಲಿ ನೀರಿನ ದರ ಏರಿಕೆ
-ಡೊಮೆಸ್ಟಿಕ್ ಕನೆಕ್ಷನ್ ಗೆ ಗರಿಷ್ಠ ಒಂದು ಲೀಟರ್ ಗೆ ಒಂದು ಪೈಸೆ ಹೆಚ್ಚಳವಾಗಲಿದೆ.
-8 ಸಾವಿರದವರೆಗಿನ ಸ್ಲ್ಯಾಬ್ ಗೆ 0.15 ಪೈಸೆ ಹೆಚ್ಚಳ.
-8-25 ಸಾವಿರ ಲೀಟರ್ ವರೆಗಿನ ಸ್ಲ್ಯಾಬ್ ಗೆ 0.40 ಪೈಸೆ ಹೆಚ್ಚಳ.
-25 ಸಾವಿರಕ್ಕಿಂತ ಹೆಚ್ಚಿನ ಲೀಟರ್ ಸ್ಲ್ಯಾಬ್ ಗೆ 0.80 ಪೈಸೆ ಹೆಚ್ಚಳ.
50-1 ಲಕ್ಷ ಲೀಟರ್ ವರೆಗಿನ ಸ್ಲ್ಯಾಬ್ ಗೆ 1 ಪೈಸೆ ಹೆಚ್ಚಳವಾಗಲಿದೆ.

 
ಈ ತಿಂಗಳಿನಿಂದಲೇ ದರ ಏರಿಕೆ ಅನ್ವಯವಾಗಲಿದೆ. ಇದರಿಂದಾಗಿ ನೀರು ಬಳಕೆದಾರರಿಗೆ ನೀರಿನ ದರ ಕನಿಷ್ಠ 20-30 ರೂ. ಹೆಚ್ಚುವರಿ ಪಾವತಿಸಬೇಕಾಗಬಹುದು.ಜಲಮಂಡಳಿ ಆರ್ಥಿಕ ಹೊರೆ ತಗ್ಗಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಜಲಮಂಡಳಿ ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments