Webdunia - Bharat's app for daily news and videos

Install App

ಬೆಂಗಳೂರು ಹವಾಮಾನ ಇಂದು: ಆರ್ ಸಿಬಿ ಪಂದ್ಯಕ್ಕೆ ಮಳೆ ಸಾಧ್ಯತೆಯಿದೆಯಾ

Krishnaveni K
ಶನಿವಾರ, 18 ಮೇ 2024 (09:59 IST)
ಬೆಂಗಳೂರು: ಕಳೆದ 10 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇಂದು ಮಳೆಯಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಮತ್ತು ಸಿಎಸ್ ಕೆ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮಳೆ ಸಾಧ‍್ಯತೆ ಬಗ್ಗೆ ಇಲ್ಲಿದೆ ಡೀಟೈಲ್ಸ್.

ಇಂದು ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಇಂದು ಬೆಳಿಗ್ಗಿನ ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿತ್ತು. ಆದರೆ ಹಾಗಂತ ಕ್ರಿಕೆಟ್ ಪ್ರೇಮಿಗಳು ಇಂದು ಮಳೆಯಿರಲ್ಲ ಎಂದು ಸಂಭ್ರಮಿಸಬೇಕಾಗಿಲ್ಲ. ಹವಾಮಾನ ವರದಿ ಪ್ರಕಾರ ಅಪರಾಹ್ನದಿಂದ ಮಳೆಯಾಗುವ ಸಾಧ‍್ಯತೆಯಿದೆ.

ಇಂದು ಅಪರಾಹ್ನ 2 ಗಂಟೆಯ ನಂತರ ಮಳೆಯಾಗುವ ಸಾಧ‍್ಯತೆ ಶೇ.70 ಕ್ಕಿಂತಲೂ ಹೆಚ್ಚಿದೆ. ಇದು ರಾತ್ರಿಯವರೆಗೂ ಮುಂದುವರಿಯುವ ಸಾಧ‍್ಯತೆಯಿದೆ. ಚಿನ್ನಸ್ವಾಮಿ ಮೈದಾನದ ಸುತ್ತವೂ ಅಪರಾಹ್ನ 2 ರ ನಂತರ ಮಳೆಯಾಗುವ ಸಾ‍ಧ್ಯತೆ ಶೇ.100 ರಷ್ಟು ಸಾಧ‍್ಯತೆಯಿದೆ.

ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ ಇಡೀ ರಾಜ್ಯದಲ್ಲೂ ಇಂದು ಅಪರಾಹ್ನದ ನಂತರ ಮಳೆಯಾಗುವ ಸಾಧ‍್ಯತೆ ದಟ್ಟವಾಗಿದೆ. ಇಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ಆಗಿದ್ದು, ಕನಿಷ್ಠ 23 ಡಿಗ್ರಿಯಾಗಲಿದೆ. ಇಂದಿನಿಂದ ನಿರಂತರ ನಾಲ್ಕು ದಿನಗಳವರೆಗೆ ಮಳೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments