Daily Horoscope

ವಿಲ್ಸನ್ ಗಾರ್ಡನ್ ನಿಗೂಢ ಸ್ಪೋಟಕ್ಕೆ ಕೊನೆಗೂ ಕಾರಣ ಬಯಲು

Krishnaveni K
ಮಂಗಳವಾರ, 19 ಆಗಸ್ಟ್ 2025 (12:07 IST)
ಬೆಂಗಳೂರು: ವಿಲ್ಸನ್ ಗಾರ್ಡನ್ ನ ಚಿನ್ನಯ್ಯನಪಾಳ್ಯದಲ್ಲಿ ಇತ್ತೀಚೆಗೆ ನಡೆದ ನಿಗೂಢ ಸ್ಪೋಟಕ್ಕೆ ಕೊನೆಗೂ ಕಾರಣ ಬಯಲಾಗಿದೆ. ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟು ಹಲವರು ಗಾಯಗೊಂಡಿದ್ದರು.

ಸ್ವಾತಂತ್ರ್ಯ ದಿನಾಚರಣೆಯಂದು ವಿಲ್ಸನ್ ಗಾರ್ಡನ್ ನ ಮನೆಯೊಂದರಲ್ಲಿ ಸ್ಪೋಟ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಬಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಇಬ್ಬರು ನಂತರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇನ್ನು ಕೆಲವರು ಗಾಯಗೊಂಡಿದ್ದರು.

ಸ್ವಾತಂತ್ರ್ಯ ದಿನದಂದೇ ಸ್ಪೋಟ ಸಂಭವಿಸಿದ್ದರಿಂದ ಇದರ ಹಿಂದೆ ದುಷ್ಕರ್ಮಿಗಳ ಕೈವಾಡವಿದೆಯೇ ಎಂದು ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಘಟನೆಗೆ ನಿಖರ ಕಾರಣ ಬಯಲಾಗಿದೆ. ರಾತ್ರಿಯಿಡೀ ಅಡುಗೆ ಅನಿಲ ಸೋರಿಕೆಯಾಗಿತ್ತು. ಬೆಳಗ್ಗೆ ಮಗು ಟಿವಿ ಆನ್ ಮಾಡಿದಾಗ ಸ್ಪೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕಸ್ತೂರಮ್ಮ ಎಂಬವರ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿತ್ತು. ಸ್ಪೋಟಕ್ಕೆ ಮನೆಯ ಛಾವಣಿಗಳೇ ಛಿದ್ರವಾಗಿತ್ತು. 8 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿತ್ತು. ಹಾನಿಗೀಡಾದ ಮನೆಗಳನ್ನು ಸರ್ಕಾರವೇ ದುರಸ್ಥಿ ಮಾಡಿಕೊಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments