Webdunia - Bharat's app for daily news and videos

Install App

ಬೆಂಗಳೂರಿನ ಮಹಿಳೆ ಕೊಲೆ ಪ್ರಕರಣ: ಆರೋಪಿ ಪತ್ತೆಗೆ 8 ತಂಡಗಳ ರಚನೆ

Sampriya
ಭಾನುವಾರ, 22 ಸೆಪ್ಟಂಬರ್ 2024 (11:46 IST)
ಬೆಂಗಳೂರು: ಸಿಲಿಕಾನ್ ಸಿಟಿಯ ವೈಯಾಲಿಕಾವಲ್‌ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಆರೋಪಿಯ ಪತ್ತೆಗಾಗಿ 8ತಂಡಗಳನ್ನು ರಚಿಸಿ, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮಗಳನ್ನು ನೋಡಲು ತಾಯಿ ಮೃತ ಮಹಾಲಕ್ಷ್ಮೀ ಮನೆಗೆ ಬಂದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ತಾಯಿಯ ಹೇಳಿಕೆಯನ್ನು ಪೊಲೀಸರು ದಾಖಲು ಮಾಡಿದ್ದಾರೆ.

ಈ ನಡುವೆ ತಾಯಿ ಮೃತ ಮಹಾಲಕ್ಷ್ಮೀ ಗಂಡನಿಗೆ ಫೋನ್ ಮಾಡಿ ಮಾಹಿತಿ ನೀಡಿ ಕರೆಸಿದ್ದಾರೆ. ಈ ವೇಳೆ ಮೃತಳ ಗಂಡ ಮತ್ತು ಆಕೆಯ ನಾಲ್ಕು ವರ್ಷದ ಮಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಈ ಹಿಂದೆ ನೆಲಮಂಗಲದ ಬಳಿ ಪತಿ ಜೊತೆ ಮಹಾಲಕ್ಷ್ಮೀ ವಾಸವಿದ್ದರು. ಆದರೆ ಗಂಡನ ಜತೆ ವೈಮನಸ್ಸಿನಿಂದಾಗಿ ಗಂಡ ಹೆಂಡತಿ 6 ತಿಂಗಳಿನಿಂದ ಬೇರೆ ಬೇರೆಯಾಗಿ ವಾಸವಿದ್ದಾರೆ. ಇನ್ನೂ ಮೃತ ಮಹಾಲಕ್ಷ್ಮೀ ಮಂತ್ರಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಪ್ರತಿ ನಿತ್ಯ ಬೈಕ್‌ನಲ್ಲಿ ಓರ್ವ ಮನೆಗೆ ಪಿಕಪ್‌, ಡ್ರಾಪ್‌ ಮಾಡುತ್ತಿರುವುದು ತಿಳಿದುಬಂದಿದ್ದು, ಆತನ ಮೇಲೆಯೇ ಕೊಲೆ ಶಂಕೆ ವ್ಯಕ್ತವಾಗಿದೆ.  ಕೊಲೆಯಾಗಿರುವ ಮಹಾಲಕ್ಷ್ಮೀಗೆ ಒಂದು ಮಗು ಸಹ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments