ವಿದ್ಯುತ್ ದರ ಹೆಚ್ಚಳ ಮಾಡಿ ಎಂದು ಬೆಸ್ಕಾಂಗೆ ಆದೇಶ

Webdunia
ಸೋಮವಾರ, 12 ಜೂನ್ 2023 (14:31 IST)
ಕರ್ನಾಟಕ ವಿದ್ಯುತ್ವಕ್ತಿ ನಿಯಂತ್ರಣ ಆಯೋಗ  (ಕೆಇಆರ್ ಸಿ) ಇಂದ ದರ ಹೆಚ್ಚಳ ಮಾಡುವಂತೆ ಬೆಸ್ಕಾಂ ಗೆ ಆದೇಶ ಮಾಡಿದೆ.ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ, ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್ ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿ ಆದೇಶ ಹೊರಡಿಸಿದೆ.ದರ ಪರಿಷ್ಕರಣೆ ಆದೇಶ ಏಪ್ರಿಲ್ ನಿಂದ ಪೂರ್ವನ್ವಯವಾಗುವುದರಿಂದ ಬಿಲ್ ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ.
 
 ಕೆಇಆರ್ ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕ ಸಂಗ್ರಹವಾಗಲಿದೆ.ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್ ಗೆ ಪ್ರತಿ ಯೂನಿಟ್ ದರ 4.75 ರೂ 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್ ಗೆ ಎರಡನೇ ಶ್ರೇಣಿ ದರ ಫಿಕ್ಸ್ ಆಗಲಿದೆ.ಪ್ರತಿ ಯೂನಿಟ್ ಗೆ 7 ರೂ. ಅನ್ವಯವಾಗಲಿದೆ.
 
ಮೊದಲು ಮೂರು ಶ್ರೇಣಿ ದರಗಳಲ್ಲಿ ಸಂಗ್ರಹ ಮಾಡಲಿದ್ದು,ಮೊದಲ 50 ಯೂನಿಟ್ ಗೆ 4.15 ರೂ.,ನಂತರದ 50 ಯೂನಿಟ್ ಗೆ 5.6 ರೂ ,100 ಯೂನಿಟ್ ಮೀರಿದರೆ 7.15 ರೂ.ಸಂಗ್ರಹಿಸಲಾಗುತ್ತಿತ್ತು.ಇದೀಗ ಎರಡು ಶ್ರೇಣಿ ದರಗಳಲ್ಲಿ  ಸಂಗ್ರಹಿಸಾಲಿರುವ 
ಕೆಇಆರ್‌ಸಿ ಮೇ 12 ರಂದು ಹೊರಡಿಸಿರುವ ಆದೇಶದಲ್ಲಿ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.
 
ದರ ಪರಿಷ್ಕರಣೆಗೆ ಕೆಇಆರ್ ಸಿ ಮುಂದೆ  ನೆವಂಬರ್ ನಲ್ಲಿ ಅರ್ಜಿ ಸಲ್ಲಿಸಿದ್ದ ಎಸ್ಕಾಂ .ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಮಾಡಲಿದೆ.ಕೆಇಆರ್ ಸಿ ಸ್ವಯಂಪ್ರೇರಿತವಾಗಿ ವಿದ್ಯುತ್‌ ದರ ಏರಿಕೆ ಆದೇಶ ನೀಡಲು ಕಾನೂನಿನಲ್ಲಿ ಅವಕಾಶ ಇದೆ.ಈ ವರ್ಷದ ಮಾರ್ಚ್ / ಏಪ್ರಿಲ್ ನಲ್ಲಿ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆ ಮಾಡಲಾಗಿದೆ.ಮಾರ್ಚ್ 29, 2023ರಂದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನೆಲೆ ಕೆಇಆರ್ ಸಿ ತಡೆ ಹಿಡಿದಿತ್ತು ಎಂದು ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments