Webdunia - Bharat's app for daily news and videos

Install App

ಬೆಸ್ಕಾಂ, ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕ ಬಲಿ!

Webdunia
ಬುಧವಾರ, 19 ಡಿಸೆಂಬರ್ 2018 (11:34 IST)
ಬೆಸ್ಕಾಂ ಅಧಿಕಾರಿಗಳು ಹಾಗೂ ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕನೊಬ್ಬ ಜೀವ ಕಳೆದುಕೊಂಡ ಘಟನೆ ನಡೆದಿದೆ.
ವಿದ್ಯುತ್ ಪ್ರವಹಿಸಿ ಬಡ ಕೂಲಿ ಕಾರ್ಮಿಕ ದಾರುಣ ಸಾವು ಕಂಡಿದ್ದಾನೆ. ತುಮಕೂರು ಜಿಲ್ಲೆ ತುರುವೆಕೆರೆ ಪಟ್ಟಣದಲ್ಲಿ ಘಟನೆ ನಡೆದಿದ್ದು, ಶ್ರೀನಿವಾಸ್ (20) ಮೃತ ಯುವಕನಾಗಿದ್ದಾನೆ.

ಶ್ರೀನಿವಾಸ್ ತಿಪಟೂರು ತಾಲೂಕಿನ ಗೊರಗೊಂಡನಹಳ್ಳಿ ನಿವಾಸಿ. ಸಾರ್ವಜನಿಕ ಆಸ್ಪತ್ರೆ ನಾಮಫಲಕ ಕಾಮಗಾರಿ ಯಲ್ಲಿ ತೊಡಗಿದ್ದ ಶ್ರೀನಿವಾಸ್ ಗೆ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ.

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯದ ಬಗ್ಗೆ ಪ್ರಕಟಣೆ ಹೊರಡಿಸಿದ್ದ ಬೆಸ್ಕಾಂ ಕ್ರಮದ
 ಹಿನ್ನೆಲೆ ಧೈರ್ಯವಾಗಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಏಕಾ ಏಕಿ ವಿದ್ಯುತ್ ಸಂಪರ್ಕ ನೀಡಿದ್ದರಿಂದ ಸಾವನ್ನಪ್ಪಿದ್ದಾನೆ.
ಕಾಮಗಾರಿ ಬಗ್ಗೆ ಬೆಸ್ಕಾಂ ಗೆ ಮಾಹಿತಿ ನೀಡದೆ ಆಸ್ಪತ್ರೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಕುಟುಂಬಕ್ಕೆ ಜೀವನಾಧರವಾಗಿದ್ದ ಕಾರ್ಮಿಕ ಶ್ರೀನಿವಾಸ ಸಾವನ್ನಪ್ಪಿದ್ದರಿಂದಾಗಿ ಆಸ್ಪತ್ರೆ ಬಳಿ ಮುಗಿಲು ಮುಟ್ಟಿದ ಮೃತನ ಸಂಬಂಧಿಕರ ರೋಧನ ಮನಕಲುಕುವಂತಿತ್ತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments