ರಾಷ್ಟ್ರೀಯ ಶಿಕ್ಷಣ ನೀತಿಗೆ ಪದವಿ ಕಾಲೇಜುಗಳಿಂದ ಉತ್ತಮ ಬೆಂಬಲ: ಉನ್ನತ ಶಿಕ್ಷಣ ಸಚಿವರು

Webdunia
ಗುರುವಾರ, 9 ಸೆಪ್ಟಂಬರ್ 2021 (20:38 IST)
ಬೆಂಗಳೂರು: ಗುಣಮಟ್ಟದ ಶಿಕ್ಷಣವೂ ಗುಣಮಟ್ಟದ ಜೀವನದ ತಳಹದಿ. ರಾಷ್ಟ್ರೀಯ ಶಿಕ್ಷಣ ನೀತಿಯು ಈ ನಿಟ್ಟಿನಲ್ಲಿ ಸಮಾಜಕ್ಕೆ ಒಳ್ಳೆ ಪರಿಹಾರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರು ಹೇಳಿದರು. 
 
ನಗರದ ಗಾರ್ಡನ್ ಸಿಟಿ ಕಾಲೇಜ್ ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಶಿಕ್ಷಣ ನೀತಿ ಜಾರಿ ಕುರಿತ ಕಾರ್ಯಾಗಾರದಲ್ಲಿ ವರ್ಚುವಲ್  ಮೂಲಕ ಭಾಗವಹಿಸಿ ಅವರು ಮಾತನಾಡಿದರು. 
 
ನೂತನ ಶಿಕ್ಷಣ ನೀತಿ ಜಾರಿ ಬಗ್ಗೆ ಎಲ್ಲಾ ಪದವಿ ಕಾಲೇಜ್ ಗಳು ಉತ್ತಮ ಸಹಕಾರ ನೀಡುತ್ತಿವೆ. ವಿದ್ಯಾರ್ಥಿಗಳಿಂದ ಕೂಡ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ನೀತಿಯನ್ನು ಮತ್ತಷ್ಟು ಹುರುಪಿನಿಂದ ಜಾರಿ ಮಾಡಲು ಸರಕಾರಕ್ಕೆ ಇನ್ನಷ್ಟು ಶಕ್ತಿ ಬಂದಿದೆ ಎಂದು ಸಚಿವರು ಹೇಳಿದರು. 
 
ಸಮಾಜದ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಣ ಮಾತ್ರ ಸಹಕಾರಿ. ನಮ್ಮ ದೇಶ ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಾಗಲು ನೂತನ ಶಿಕ್ಷಣ ನೀತಿ ಅತಿ ದೊಡ್ಡ ಮಾರ್ಗವಾಗಿದೆ ಎಂದು ಅವರು ನುಡಿದರು. 
 
ಈಗಾಗಲೇ ನೀತಿ ಜಾರಿಗೆ ಶೈಕ್ಷಣಿಕ ಸುಧಾರಣೆಗಳನ್ನು ಕೈಗೊಳ್ಳಲಾಗಿದೆ. ಉಳಿದ ಸುಧಾರಣೆಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು. ಗುಣಮಟ್ಟದ ಶಿಕ್ಷಣದಿಂದ ಎಲ್ಲಾ  ಕ್ಷೇತ್ರಗಳಲ್ಲೂ ಬದಲಾವಣೆ ಆಗಲಿದೆ ಎಂದು ಅವರು ಹೇಳಿದರು. 
 
ಗಾರ್ಡನ್ ಸಿಟಿ ಕಾಲೇಜ್ ನ ಮುಖ್ಯಸ್ಥ ಡಾ.ಜೋಸೆಫ್, ಉದ್ಯಮಿ ಜೇಕಬ್ ಕ್ರಾಸ್ತಾ, ಕಾಲೇಜ್ ನಿರ್ದೇಶಕ ಕ್ರಿಸ್ಟೋ ಜೋಸೆಫ್ ಮುಂತಾದವರು ಹಾಜರಿದ್ದರು.
education

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments