Webdunia - Bharat's app for daily news and videos

Install App

ರಾಷ್ಟ್ರೀಯ ಶಿಕ್ಷಣ ನೀತಿಗೆ ಪದವಿ ಕಾಲೇಜುಗಳಿಂದ ಉತ್ತಮ ಬೆಂಬಲ: ಉನ್ನತ ಶಿಕ್ಷಣ ಸಚಿವರು

Webdunia
ಗುರುವಾರ, 9 ಸೆಪ್ಟಂಬರ್ 2021 (20:38 IST)
ಬೆಂಗಳೂರು: ಗುಣಮಟ್ಟದ ಶಿಕ್ಷಣವೂ ಗುಣಮಟ್ಟದ ಜೀವನದ ತಳಹದಿ. ರಾಷ್ಟ್ರೀಯ ಶಿಕ್ಷಣ ನೀತಿಯು ಈ ನಿಟ್ಟಿನಲ್ಲಿ ಸಮಾಜಕ್ಕೆ ಒಳ್ಳೆ ಪರಿಹಾರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರು ಹೇಳಿದರು. 
 
ನಗರದ ಗಾರ್ಡನ್ ಸಿಟಿ ಕಾಲೇಜ್ ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಶಿಕ್ಷಣ ನೀತಿ ಜಾರಿ ಕುರಿತ ಕಾರ್ಯಾಗಾರದಲ್ಲಿ ವರ್ಚುವಲ್  ಮೂಲಕ ಭಾಗವಹಿಸಿ ಅವರು ಮಾತನಾಡಿದರು. 
 
ನೂತನ ಶಿಕ್ಷಣ ನೀತಿ ಜಾರಿ ಬಗ್ಗೆ ಎಲ್ಲಾ ಪದವಿ ಕಾಲೇಜ್ ಗಳು ಉತ್ತಮ ಸಹಕಾರ ನೀಡುತ್ತಿವೆ. ವಿದ್ಯಾರ್ಥಿಗಳಿಂದ ಕೂಡ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ನೀತಿಯನ್ನು ಮತ್ತಷ್ಟು ಹುರುಪಿನಿಂದ ಜಾರಿ ಮಾಡಲು ಸರಕಾರಕ್ಕೆ ಇನ್ನಷ್ಟು ಶಕ್ತಿ ಬಂದಿದೆ ಎಂದು ಸಚಿವರು ಹೇಳಿದರು. 
 
ಸಮಾಜದ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಣ ಮಾತ್ರ ಸಹಕಾರಿ. ನಮ್ಮ ದೇಶ ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಾಗಲು ನೂತನ ಶಿಕ್ಷಣ ನೀತಿ ಅತಿ ದೊಡ್ಡ ಮಾರ್ಗವಾಗಿದೆ ಎಂದು ಅವರು ನುಡಿದರು. 
 
ಈಗಾಗಲೇ ನೀತಿ ಜಾರಿಗೆ ಶೈಕ್ಷಣಿಕ ಸುಧಾರಣೆಗಳನ್ನು ಕೈಗೊಳ್ಳಲಾಗಿದೆ. ಉಳಿದ ಸುಧಾರಣೆಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು. ಗುಣಮಟ್ಟದ ಶಿಕ್ಷಣದಿಂದ ಎಲ್ಲಾ  ಕ್ಷೇತ್ರಗಳಲ್ಲೂ ಬದಲಾವಣೆ ಆಗಲಿದೆ ಎಂದು ಅವರು ಹೇಳಿದರು. 
 
ಗಾರ್ಡನ್ ಸಿಟಿ ಕಾಲೇಜ್ ನ ಮುಖ್ಯಸ್ಥ ಡಾ.ಜೋಸೆಫ್, ಉದ್ಯಮಿ ಜೇಕಬ್ ಕ್ರಾಸ್ತಾ, ಕಾಲೇಜ್ ನಿರ್ದೇಶಕ ಕ್ರಿಸ್ಟೋ ಜೋಸೆಫ್ ಮುಂತಾದವರು ಹಾಜರಿದ್ದರು.
education

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments