Webdunia - Bharat's app for daily news and videos

Install App

ರಾಷ್ಟ್ರೀಯ ಶಿಕ್ಷಣ ನೀತಿಗೆ ಪದವಿ ಕಾಲೇಜುಗಳಿಂದ ಉತ್ತಮ ಬೆಂಬಲ: ಉನ್ನತ ಶಿಕ್ಷಣ ಸಚಿವರು

Webdunia
ಗುರುವಾರ, 9 ಸೆಪ್ಟಂಬರ್ 2021 (20:38 IST)
ಬೆಂಗಳೂರು: ಗುಣಮಟ್ಟದ ಶಿಕ್ಷಣವೂ ಗುಣಮಟ್ಟದ ಜೀವನದ ತಳಹದಿ. ರಾಷ್ಟ್ರೀಯ ಶಿಕ್ಷಣ ನೀತಿಯು ಈ ನಿಟ್ಟಿನಲ್ಲಿ ಸಮಾಜಕ್ಕೆ ಒಳ್ಳೆ ಪರಿಹಾರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರು ಹೇಳಿದರು. 
 
ನಗರದ ಗಾರ್ಡನ್ ಸಿಟಿ ಕಾಲೇಜ್ ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಶಿಕ್ಷಣ ನೀತಿ ಜಾರಿ ಕುರಿತ ಕಾರ್ಯಾಗಾರದಲ್ಲಿ ವರ್ಚುವಲ್  ಮೂಲಕ ಭಾಗವಹಿಸಿ ಅವರು ಮಾತನಾಡಿದರು. 
 
ನೂತನ ಶಿಕ್ಷಣ ನೀತಿ ಜಾರಿ ಬಗ್ಗೆ ಎಲ್ಲಾ ಪದವಿ ಕಾಲೇಜ್ ಗಳು ಉತ್ತಮ ಸಹಕಾರ ನೀಡುತ್ತಿವೆ. ವಿದ್ಯಾರ್ಥಿಗಳಿಂದ ಕೂಡ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ನೀತಿಯನ್ನು ಮತ್ತಷ್ಟು ಹುರುಪಿನಿಂದ ಜಾರಿ ಮಾಡಲು ಸರಕಾರಕ್ಕೆ ಇನ್ನಷ್ಟು ಶಕ್ತಿ ಬಂದಿದೆ ಎಂದು ಸಚಿವರು ಹೇಳಿದರು. 
 
ಸಮಾಜದ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಣ ಮಾತ್ರ ಸಹಕಾರಿ. ನಮ್ಮ ದೇಶ ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಾಗಲು ನೂತನ ಶಿಕ್ಷಣ ನೀತಿ ಅತಿ ದೊಡ್ಡ ಮಾರ್ಗವಾಗಿದೆ ಎಂದು ಅವರು ನುಡಿದರು. 
 
ಈಗಾಗಲೇ ನೀತಿ ಜಾರಿಗೆ ಶೈಕ್ಷಣಿಕ ಸುಧಾರಣೆಗಳನ್ನು ಕೈಗೊಳ್ಳಲಾಗಿದೆ. ಉಳಿದ ಸುಧಾರಣೆಗಳನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು. ಗುಣಮಟ್ಟದ ಶಿಕ್ಷಣದಿಂದ ಎಲ್ಲಾ  ಕ್ಷೇತ್ರಗಳಲ್ಲೂ ಬದಲಾವಣೆ ಆಗಲಿದೆ ಎಂದು ಅವರು ಹೇಳಿದರು. 
 
ಗಾರ್ಡನ್ ಸಿಟಿ ಕಾಲೇಜ್ ನ ಮುಖ್ಯಸ್ಥ ಡಾ.ಜೋಸೆಫ್, ಉದ್ಯಮಿ ಜೇಕಬ್ ಕ್ರಾಸ್ತಾ, ಕಾಲೇಜ್ ನಿರ್ದೇಶಕ ಕ್ರಿಸ್ಟೋ ಜೋಸೆಫ್ ಮುಂತಾದವರು ಹಾಜರಿದ್ದರು.
education

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments