ಚಿನ್ನ ಕೊಳ್ಳುವ ಮುನ್ನ ಎಚ್ಚರ

Webdunia
ಗುರುವಾರ, 3 ಫೆಬ್ರವರಿ 2022 (18:07 IST)
ಕಳಪೆ ಗುಣಮಟ್ಟದ ಚಿನ್ನವನ್ನು ಕರಗಿಸಿ ಬಿಸ್ಕೆಟ್‍ಗಳನ್ನು ಮಾಡಿ ಶುದ್ಧತೆಯ ಬಗ್ಗೆ ನಕಲಿ ಸೀಲ್‍ಗಳನ್ನು ಹಾಕಿ ಪರಿಶುದ್ಧ ಚಿನ್ನವೆಂದು ನಂಬಿಸಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ.ರಾಜೇಶ್ ಎಚ್.ಬೋಸ್ಲೆ (44), ಅಜಯ್ ಕಾಂತಿಲಾಲ್ ಕದಮ್ (19), ಅಕ್ಷಯ್ (26) ಮತ್ತು ಹೃತಿಕ್ ಬಾಬಾ ಸಾಹೇಬ್ ಸಾಲುಂಕಿ (19) ಬಂಧಿತ ಆರೋಪಿಗಳು.
 
ಬಂಧಿತರಿಂದ 1 ಕೆಜಿ, 790 ಗ್ರಾಂ ತೂಕದ ಚಿನ್ನ, 20 ಸಾವಿರ ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಪ್ರತಿಷ್ಠಿತ ಕಂಪೆನಿಗಳ ಶುದ್ಧತೆಯ ನಕಲಿ ಸೀಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರತ್ ಪೇಟೆ ಮುಖ್ಯರಸ್ತೆಯಲ್ಲಿರುವ ಮಾತಾಜಿ ಜ್ಯುವೆಲರಿ ಮಾರ್ಕೆಟ್ ಕಟ್ಟಡದಲ್ಲಿರುವ ಅಂಗಡಿಯಲ್ಲಿ ಕೆಲವರು ಓಸ್ಮಿಯೋಮ್ ಸ್ಪಾಂಜ್ ಬಳಸಿ ಕಲಬೆರಕೆ ಮಾಡಿ ಯಾವುದೇ ಪರವಾನಗಿ ಇಲ್ಲದೆ ಚಿನ್ನವನ್ನು ಕರಗಿಸಿ ಬಿಸ್ಕೆಟ್‍ಗಳನ್ನು ಮಾಡಿ ಚಿನ್ನ ಶುದ್ಧತೆ ಬಗ್ಗೆ ನಕಲಿ ಸೀಲ್‍ಗಳನ್ನು ಹಾಕಿ ಪರಿಶುದ್ಧ ಚಿನ್ನವೆಂದು ಮಾರಾಟ ಮಾಡುತ್ತಿದ್ದರು.
 
ಪ್ರತಿದಿನ 3 ರಿಂದ 5ಕೆಜಿಯಷ್ಟು ವಿಲೇವಾರಿ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಬಂದಿದೆ. ತಕ್ಷಣ ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂಗಡಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿ ಕೃತ್ಯದಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರ ಬಳಿ ಇದ್ದ ಚಿನ್ನ, ಹಣ, ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಮುಂದಿನ ಸುದ್ದಿ
Show comments