ಮನೆ ಬ್ರೋಕರ್ ಗಳಿಗೆ ಪತ್ರ ಕೊಡುವ ಮುನ್ನ ಎಚ್ಚರ ...!!!

Webdunia
ಶನಿವಾರ, 24 ಸೆಪ್ಟಂಬರ್ 2022 (17:01 IST)
ನಿಮ್ಮ ಪ್ರಾಪರ್ಟಿಯನ್ನ ಮಾರಾಟ ಮಾಡಿ ವಂಚನೆ ಮಾಡುವ ಗ್ಯಾಂಗ್ ಒಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಹೆಚ್​ಎಸ್​ಆರ್ ಲೇಔಟ್ ನಲ್ಲಿ ಪ್ರಾಪರ್ಟಿ ಹೊಂದಿದ್ದ 76 ವರ್ಷದ ಕೃಷ್ಣಾರೆಡ್ಡಿ ಎಂಬುವವರು ವಂಚನೆಗೆ ಒಳಗಾಗಿದ್ದಾರೆ.
ಮಾಲೀಕನಾ ಹೆಸರು ವಂಚಕನ ಹೆಸರು ಒಂದೇ ಇದಿದ್ದರಿಂದ ವಂಚನೆ ಮಾಡೋದಕ್ಕೆ ಮತ್ತಷ್ಟು ಸುಲಭವಾಗಿದೆ. ಸದ್ಯ ಈಗ ವಂಚನೆಗೆ ಒಳಗಾದ ಕೃಷ್ಣಾರೆಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
 
ವಂಚನೆಗೆ ಒಳಗಾದ ಕೃಷ್ಣರೆಡ್ಡಿಗೆ ಪರಿಚಯವಾಗಿದ್ದ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ವಂಚಕ ಕೃಷ್ಣಾ ರೆಡ್ಡಿ ಎಂಬುವವನು ಪ್ರಾಪರ್ಟಿ ಮೇಲೆ ಲೋನ್ ತೆಗೆದುಕೊಳ್ಳುವ ಸಲುವಾಗಿ ಜೆರಾಕ್ಸ್ ದಾಖಲೆಗಳನ್ನ ನೀಡಿದ್ದ. ಆ ಎಲ್ಲಾ ದಾಖಲೆಗಳನ್ನ ಬ್ಯಾಂಕ್ ಎಂಪ್ಲಾಯ್ ಕೃಷ್ಣಾರೆಡ್ಡಿ ವಂಚಕ ನಾಗರಾಜ್ ಗೆ ನೀಡಿದ್ದ. ಬಳಿಕ ಆ ದಾಖಲೆಗಳನ್ನ ಒರಿಜಿನಲ್ ರೀತಿ ಮಾಡಿ ಆರೋಪಿ ನಾಗರಾಜ್ ಮಾರಾಟ ಮಾಡಿದ್ದಾನೆ. ಇಂಜಿನಿಯರ್ ದಿಲೀಪ್ ಕುಮಾರ್ ಎಂಬುವವರಿಗೆ ಕೃಷ್ಣಾ ರೆಡ್ಡಿಯವರ ಹೆಚ್​ಎಸ್​ಆರ್ ಲೇಔಟ್ ನ ಪ್ರಾಪರ್ಟಿ ಮಾರಿದ್ದಾನೆ.
 
ನಾಗರಾಜ್ ನೀಡಿದ್ದ ದಾಖಲೆಗಳೆಲ್ಲವೂ ಒರಿಜಿನಲ್ ಎಂದು ತಿಳಿದು ದಿಲೀಪ್ ಪ್ರಾಪರ್ಟಿ ಖರೀದಿ ಮಾಡಿದ್ದಾರೆ. ಬಳಿಕ ವಂಚನೆ ಬೆಳಕಿಗೆ ಬಂದಿದ್ದು, ಆಶೋಕ್ ನಗರ ಪೊಲೀಸ್ ಠಾಣೆಗೆ ಅಧಿಕಾರಿಗಳು ದೂರು ನೀಡಿದ್ರು. ಅಶೋಕ್ ನಗರ ಪೊಲೀಸರು 76 ವರ್ಷದ ವೃದ್ಧ ಕೃಷ್ಣಾ ರೆಡ್ಡಿಯನ್ನ ಪ್ರಕರಣ ಸಂಬಂಧ ಭೇಟಿ ಮಾಡಿದ್ರು. ಪೊಲೀಸರು ಮನೆಗೆ ಬಂದಾಗಲೇ ಕೃಷ್ಣರೆಡ್ಡಿ ವಂಚನೆಗೆ ಒಳಗಾಗಿರೋದು ಗೊತ್ತಾಗಿದೆ. ತಕ್ಷಣವೇ ಹೆಚ್​ಎಸ್​ಆರ್ ಪೊಲೀಸ್ ಠಾಣೆಗೆ ವೃದ್ಧ ಕೃಷ್ಣ ರೆಡ್ಡಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ಸಂಬಂಧ ಇಬ್ಬರನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments