ಕ್ಯಾಶ್ ಬ್ಯಾಕ್ ಆಫರ್ ಅಪಾಯ

Webdunia
ಬುಧವಾರ, 2 ಮಾರ್ಚ್ 2022 (14:52 IST)
ಪೇಟಿಎಂ ಕ್ಯಾಶ್ ಬ್ಯಾಕ್ ಆಫರ್ ಹೆಸರಿನಲ್ಲಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಸೈಬರ್ ವಂಚಕನನ್ನು ಈಶಾನ್ಯ ವಿಭಾಗದ ಸೈಬರ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
 
ದೀಪಕ್ ಚಕ್ರವರ್ತಿ ಬಂಧಿತ ಆರೋಪಿ. ಈತ ತಾನು ಪೇಟಿಎಂ ಎಕ್ಸಿಕ್ಯೂಟೀವ್ ಎಂದು ಪರಿಚಯಿಸಿಕೊಳ್ಳುತ್ತಿದ್ದ.
ಪರಿಚಯವಾದವರಿಗೆ ಕ್ಯಾಶ್ ಬ್ಯಾಕ್ ಆಫರ್‌ಗಾಗಿ ಪೇಟಿಎಂ ಬಿಸಿನೆಸ್ ಆಪ್ ಇನ್‌ಸ್ಟಾಲ್ ಮಾಡಿಸುತ್ತಿದ್ದ. ಆ ಬಳಿಕ 20 ಸಾವಿರ ರೂ. ಠೇವಣಿ ಇಡುವಂತೆ ಸೂಚಿಸಿ ಹಣ ಪಡೆದು ಮೋಸ ಮಾಡುತ್ತಿದ್ದ. ಅನೇಕ ಮಂದಿಗೆ ಈ ರೀತಿ ಮೋಸ ಮಾಡಿದ್ದ. ಈ ಕುರಿತು ಈಶಾನ್ಯ ವಿಭಾಗದ ಸೈಬರ್ ಠಾಣೆಗೆ ದೂರುಗಳು ದಾಖಲಾಗಿದ್ದವು. ಆರೋಪಿ ಚಲನವಲನ ಗಮನಿಸಿ ದೀಪಕ್ ಚಕ್ರವರ್ತಿಯನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅನೇಕರಿಗೆ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ.
 
ಆನ್‌ಲೈನ್ ವಹಿವಾಟು ನಡೆಸುವ ಆಪ್‌ಗಳು ಗ್ರಾಹಕರನ್ನು ಸೆಳೆಯಲು ಕ್ಯಾಷ್ ಬ್ಯಾಕ್ ಆಫರ್ ನೀಡುತ್ತಿವೆ. ಹೀಗಾಗಿ ಜನರು ಸಣ್ಣ ಅನುಮಾನ ಪಡದೇ ಆಪ್‌ಗಳ ಕ್ಯಾಶ್ ಬ್ಯಾಕ್ ಆಫರ್ ಬಗ್ಗೆ ಸಂಶಯಗಳಿಲ್ಲದೇ ನಂಬುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ದೀಪಕ್ ಚಕ್ರವರ್ತಿ ಪೇಟಿಎಂ ಬಿಸಿನೆಸ್ ಆಪ್ ಇನ್‌ಸ್ಟಾಲ್ ಮಾಡಿಸುವ ಹೆಸರಿನಲ್ಲಿ ಅನೇಕರಿಂದ ಹಣ ಪಡೆದು ದೋಖಾ ಮಾಡಿದ್ದಾನೆ. ಆನ್‌ಲೈನ್ ಆಫರ್‌ಗಳ ಹೆಸರಿನಲ್ಲಿ ಸೈಬರ್ ವಂಚಕರು ವಂಚನೆಗೆ ಇಳಿದಿದ್ದು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments