Webdunia - Bharat's app for daily news and videos

Install App

ಕ್ಯಾಶ್ ಬ್ಯಾಕ್ ಆಫರ್ ಅಪಾಯ

Webdunia
ಬುಧವಾರ, 2 ಮಾರ್ಚ್ 2022 (14:52 IST)
ಪೇಟಿಎಂ ಕ್ಯಾಶ್ ಬ್ಯಾಕ್ ಆಫರ್ ಹೆಸರಿನಲ್ಲಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಸೈಬರ್ ವಂಚಕನನ್ನು ಈಶಾನ್ಯ ವಿಭಾಗದ ಸೈಬರ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
 
ದೀಪಕ್ ಚಕ್ರವರ್ತಿ ಬಂಧಿತ ಆರೋಪಿ. ಈತ ತಾನು ಪೇಟಿಎಂ ಎಕ್ಸಿಕ್ಯೂಟೀವ್ ಎಂದು ಪರಿಚಯಿಸಿಕೊಳ್ಳುತ್ತಿದ್ದ.
ಪರಿಚಯವಾದವರಿಗೆ ಕ್ಯಾಶ್ ಬ್ಯಾಕ್ ಆಫರ್‌ಗಾಗಿ ಪೇಟಿಎಂ ಬಿಸಿನೆಸ್ ಆಪ್ ಇನ್‌ಸ್ಟಾಲ್ ಮಾಡಿಸುತ್ತಿದ್ದ. ಆ ಬಳಿಕ 20 ಸಾವಿರ ರೂ. ಠೇವಣಿ ಇಡುವಂತೆ ಸೂಚಿಸಿ ಹಣ ಪಡೆದು ಮೋಸ ಮಾಡುತ್ತಿದ್ದ. ಅನೇಕ ಮಂದಿಗೆ ಈ ರೀತಿ ಮೋಸ ಮಾಡಿದ್ದ. ಈ ಕುರಿತು ಈಶಾನ್ಯ ವಿಭಾಗದ ಸೈಬರ್ ಠಾಣೆಗೆ ದೂರುಗಳು ದಾಖಲಾಗಿದ್ದವು. ಆರೋಪಿ ಚಲನವಲನ ಗಮನಿಸಿ ದೀಪಕ್ ಚಕ್ರವರ್ತಿಯನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅನೇಕರಿಗೆ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ.
 
ಆನ್‌ಲೈನ್ ವಹಿವಾಟು ನಡೆಸುವ ಆಪ್‌ಗಳು ಗ್ರಾಹಕರನ್ನು ಸೆಳೆಯಲು ಕ್ಯಾಷ್ ಬ್ಯಾಕ್ ಆಫರ್ ನೀಡುತ್ತಿವೆ. ಹೀಗಾಗಿ ಜನರು ಸಣ್ಣ ಅನುಮಾನ ಪಡದೇ ಆಪ್‌ಗಳ ಕ್ಯಾಶ್ ಬ್ಯಾಕ್ ಆಫರ್ ಬಗ್ಗೆ ಸಂಶಯಗಳಿಲ್ಲದೇ ನಂಬುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ದೀಪಕ್ ಚಕ್ರವರ್ತಿ ಪೇಟಿಎಂ ಬಿಸಿನೆಸ್ ಆಪ್ ಇನ್‌ಸ್ಟಾಲ್ ಮಾಡಿಸುವ ಹೆಸರಿನಲ್ಲಿ ಅನೇಕರಿಂದ ಹಣ ಪಡೆದು ದೋಖಾ ಮಾಡಿದ್ದಾನೆ. ಆನ್‌ಲೈನ್ ಆಫರ್‌ಗಳ ಹೆಸರಿನಲ್ಲಿ ಸೈಬರ್ ವಂಚಕರು ವಂಚನೆಗೆ ಇಳಿದಿದ್ದು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments