ಕ್ಯಾಶ್ ಬ್ಯಾಕ್ ಆಫರ್ ಅಪಾಯ

Webdunia
ಬುಧವಾರ, 2 ಮಾರ್ಚ್ 2022 (14:52 IST)
ಪೇಟಿಎಂ ಕ್ಯಾಶ್ ಬ್ಯಾಕ್ ಆಫರ್ ಹೆಸರಿನಲ್ಲಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಸೈಬರ್ ವಂಚಕನನ್ನು ಈಶಾನ್ಯ ವಿಭಾಗದ ಸೈಬರ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
 
ದೀಪಕ್ ಚಕ್ರವರ್ತಿ ಬಂಧಿತ ಆರೋಪಿ. ಈತ ತಾನು ಪೇಟಿಎಂ ಎಕ್ಸಿಕ್ಯೂಟೀವ್ ಎಂದು ಪರಿಚಯಿಸಿಕೊಳ್ಳುತ್ತಿದ್ದ.
ಪರಿಚಯವಾದವರಿಗೆ ಕ್ಯಾಶ್ ಬ್ಯಾಕ್ ಆಫರ್‌ಗಾಗಿ ಪೇಟಿಎಂ ಬಿಸಿನೆಸ್ ಆಪ್ ಇನ್‌ಸ್ಟಾಲ್ ಮಾಡಿಸುತ್ತಿದ್ದ. ಆ ಬಳಿಕ 20 ಸಾವಿರ ರೂ. ಠೇವಣಿ ಇಡುವಂತೆ ಸೂಚಿಸಿ ಹಣ ಪಡೆದು ಮೋಸ ಮಾಡುತ್ತಿದ್ದ. ಅನೇಕ ಮಂದಿಗೆ ಈ ರೀತಿ ಮೋಸ ಮಾಡಿದ್ದ. ಈ ಕುರಿತು ಈಶಾನ್ಯ ವಿಭಾಗದ ಸೈಬರ್ ಠಾಣೆಗೆ ದೂರುಗಳು ದಾಖಲಾಗಿದ್ದವು. ಆರೋಪಿ ಚಲನವಲನ ಗಮನಿಸಿ ದೀಪಕ್ ಚಕ್ರವರ್ತಿಯನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅನೇಕರಿಗೆ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ.
 
ಆನ್‌ಲೈನ್ ವಹಿವಾಟು ನಡೆಸುವ ಆಪ್‌ಗಳು ಗ್ರಾಹಕರನ್ನು ಸೆಳೆಯಲು ಕ್ಯಾಷ್ ಬ್ಯಾಕ್ ಆಫರ್ ನೀಡುತ್ತಿವೆ. ಹೀಗಾಗಿ ಜನರು ಸಣ್ಣ ಅನುಮಾನ ಪಡದೇ ಆಪ್‌ಗಳ ಕ್ಯಾಶ್ ಬ್ಯಾಕ್ ಆಫರ್ ಬಗ್ಗೆ ಸಂಶಯಗಳಿಲ್ಲದೇ ನಂಬುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ದೀಪಕ್ ಚಕ್ರವರ್ತಿ ಪೇಟಿಎಂ ಬಿಸಿನೆಸ್ ಆಪ್ ಇನ್‌ಸ್ಟಾಲ್ ಮಾಡಿಸುವ ಹೆಸರಿನಲ್ಲಿ ಅನೇಕರಿಂದ ಹಣ ಪಡೆದು ದೋಖಾ ಮಾಡಿದ್ದಾನೆ. ಆನ್‌ಲೈನ್ ಆಫರ್‌ಗಳ ಹೆಸರಿನಲ್ಲಿ ಸೈಬರ್ ವಂಚಕರು ವಂಚನೆಗೆ ಇಳಿದಿದ್ದು ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments