Webdunia - Bharat's app for daily news and videos

Install App

ಭಗವಂತ ಖೂಬಾಗೆ ಬಂದೂಕು ಸಿಡಿಸಿ ಸ್ವಾಗತ!

Webdunia
ಬುಧವಾರ, 18 ಆಗಸ್ಟ್ 2021 (17:37 IST)
ಯಾದಗಿರಿ ಜಿಲ್ಲೆಗೆ ಜನಾರ್ಶೀವಾದ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸಿದ ಕೇಂದ್ರ ಸಚಿವ ಭಗವಂತ  ಖೂಬಾಗೆ ನಾಡಬಂದೂಕು ಸಿಡಿಸಿ ಭ
ರ್ಜರಿ ಸ್ವಾಗತ ಮಾಡಲಾಯಿತು.
ಯಾದಗಿರಿ ತಾಲೂಕಿನ ಯರಗೋಳ ಗ್ರಾಮಕ್ಕೆ ಆಗಮಿಸಿದ ಕೇಂದ್ರ ಸಚಿವ ಭಗವಂತ ಖೂಬಾ ಕೇಂದ್ರ ಸಚಿವ ಭಗವಂತ ಖೂಬಾಗೆ ಯರಗೋಳ ಗ್ರಾಮದಲ್ಲಿ ಪೊಲೀಸರ ಮುಂದೆಯೇ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸ್ವಾಗತಿಸಿ ಕಾರ್ಯಕರ್ತರು ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ಯಾದಗಿರಿ ಎಸ್ಪಿ ವೇದಮೂರ್ತಿ ಗಾಳಿಯಲ್ಲಿ ಗುಂಡು ಹಾರಿಸಿದವರ ವಿರುದ್ಧ ಪ್ರಕರಣ ದಾಖಲಿಸಲು ಪಿಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು ಕೇಂದ್ರ ಸಚಿವ ಖೂಬಾ ಆಗಮನದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿ ಜನ ಜಾತ್ರೆ ಎಂಬಂತೆ ಜೆಸಿಬಿಗಳ ಮೂಲಕ ಪುಷ್ಪ ಅರ್ಪಿಸಿ ಭವ್ಯ ಸ್ವಾಗತ ಮಾಡಿಕೊಂಡರು. ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಮಾಜಿ ಸಚಿವ ಬಾಬೂರಾವ್ ಚಿಂಚನಸೂರು, ಸುರಪುರ ಶಾಸಕರಾದ ರಾಜುಗೌಡ, ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಹಾಗೂ ಬಿಜೆಪಿ ಮುಖಂಡರು ಭರ್ಜರಿ ಸ್ವಾಗತ ಮಾಡಿಕೊಂಡರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments