Webdunia - Bharat's app for daily news and videos

Install App

ಈಶ್ವರಪ್ಪ, ರಮೇಶ್​​​ ಪರ ಭೈರತಿ ಬ್ಯಾಟಿಂಗ್

Webdunia
ಭಾನುವಾರ, 2 ಅಕ್ಟೋಬರ್ 2022 (20:48 IST)
ಮಾಜಿ ಸಚಿವ ಈಶ್ವರಪ್ಪ, ಮಾಜಿ ಸಚಿವ ರಮೇಶ್ ಜಾರಹೊಳಿ ಪರ ಸಚಿವ ಭೈರತಿ ಬಸವರಾಜ್​​​ ಬ್ಯಾಟಿಂಗ್ ಮಾಡಿದ್ದಾರೆ. ಅವರುಗಳಿಗೆ ಸಚಿವ ಸ್ಥಾನ ನೀಡುವಂತೆ ಖಂಡಿತ ಒತ್ತಾಯ ಮಾಡುತ್ತೇನೆ. ಸಚಿವ ಸ್ಥಾನ ಕೊಡುವುದು ಬಿಡುವುದು ಸಿಎಂ ವಿವೇಚನೆಗೆ ಬಿಟ್ಟಿದ್ದು, ನನ್ನ ಜೊತೆಗೆ ಬಂದವರೊಂದಿಗೆ ಸೇರಿ ಒತ್ತಾಯ ಮಾಡುತ್ತೇನೆ ಎಂದು ದಾವಣಗೆರೆಯಲ್ಲಿ ಸಚಿವ ಭೈರತಿ ಬಸವರಾಜ್ ಹೇಳಿದ್ರು. ರಮೇಶ್ ಜಾರಕಿಹೊಳಿ, ಈಶ್ವರಪ್ಪ ಕಳಂಕ ರಹಿತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದ್ರು. RSS ಬ್ಯಾನ್​​​ ಮಾಡಬೇಕು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, RSS ಏನು ದೇಶ-ದ್ರೋಹದ ಕೆಲಸ ಮಾಡಿದೆ. RSS ದೇಶಭಕ್ತ ಸಂಸ್ಥೆ. ದೇಶದ ಬಗ್ಗೆ ಅಪಾರ ಕಾಳಜಿ ವಹಿಸುವುದನ್ನ ಸಿದ್ದರಾಮಯ್ಯಗೆ ಸಹಿಸಲು ಆಗುತ್ತಿಲ್ಲ. ಇಲ್ಲಿ ಅನ್ನ ತಿಂದು ದ್ರೋಹ ಬಗೆಯುವ ಕೆಲಸ PFI ಮಾಡಿದೆ ಎಂದ್ರು. ಭಾರತ್ ಜೋಡೊ ಯಾತ್ರೆ ಕುರಿತು ಮಾತನಾಡಿದ ಅವರು, ಪಾದಯಾತ್ರೆಗೆ ಹೆದರುವ ಪರಿಸ್ಥಿತಿ BJPಗೆ ಇಲ್ಲ. ಇಂತಹ ನೂರು ನಾಯಕರು ಬಂದರೂ, BJPಯನ್ನು ಏನೂ ಮಾಡಲು ಸಾಧ್ಯ ಇಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments