Webdunia - Bharat's app for daily news and videos

Install App

ಕರ್ನಾಟಕ ಪ್ರವೇಶಿಸಿದ ಭಾರತ್​​​ ಜೋಡೋ ಯಾತ್ರೆ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (20:33 IST)
ಇಂದು ಭಾರತ್​​ ಜೋಡೋ ಕರ್ನಾಟಕವನ್ನು ಪ್ರವೇಶಿಸಿದೆ. ಕರುನಾಡಲ್ಲಿ ರಾಹುಲ್​ ಗಾಂಧಿ ಭಾರತ್​ ಜೋಡೋ ಆರಂಭವಾಗಿದ್ದು, ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರತ್​​ ಜೋಡೋ ಆರಂಭವಾಯ್ತು. ರಾಹುಲ್​ ಗಾಂಧಿ ಪಾದಯಾತ್ರೆಗೆ ಸಾವಿರಾರು ಮಂದಿ ಸಾಥ್​​​ಕೊಡ್ತಿದ್ದಾರೆ. ರಾಹುಲ್​ ಗಾಂಧಿ ಜೊತೆ ಡಿಕೆಶಿ, ಸಿದ್ದರಾಮಯ್ಯ ಯಾತ್ರೆಯಲ್ಲಿ ತೆರಳಿದ್ದು,  ರಾಗಾ ಯಾತ್ರೆಯಲ್ಲಿ ಡಿಕೆಶಿ-ಸಿದ್ದು ಒಗ್ಗಟ್ಟಿನ ಜಪ ಮಾಡಿದ್ರು. ಗುಂಡ್ಲುಪೇಟೆಯಲ್ಲಿ ನಡೆದ ಪಾದಯಾತ್ರೆ ಉದ್ಘಾಟನೆ ಸಮಾವೇಶದಲ್ಲಿ ಮಾತನಾಡಿದ ಅವರು AICC ಮಾಜಿ ಅಧ್ಯಕ್ಷ ರಾಹುಲ್ ‌ಗಾಂಧಿ ಯಾವ ಶಕ್ತಿ ನಮ್ಮ ಯಾತ್ರೆಯನ್ನು ತಡೆಯಲು ಸಾಧ್ಯವಿಲ್ಲ ಎಂದ್ರು. ದೇಶದಲ್ಲಿ ‌ಬಿಜೆಪಿ‌, RSS ದ್ವೇಷ ಹರಡುವುದರ ವಿರುದ್ಧ ಸಂವಿಧಾನದ ರಕ್ಷಣೆಗಾಗಿ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಸಂವಿಧಾನ ಇಲ್ಲ‌ ಅಂದರೆ ರಾಷ್ಟ್ರ ಧ್ವಜಕ್ಕೆ ಬೆಲೆ ಇಲ್ಲ ಎಂದ ಅವರು, ಮಳೆ, ಬಿಸಿಲು ಇದ್ದರೂ ನಿರಂತರ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದ್ರು. ಈ‌ ಯಾತ್ರೆಯಲ್ಲಿ ಎಲ್ಲಾ ಧರ್ಮ, ಭಾಷೆಯವರು ಭಾಗಿಯಾಗಿದ್ದಾರೆ. ಪಾದಯಾತ್ರೆಯಲ್ಲಿ ಜಾತಿ, ಧರ್ಮ ಪ್ರಶ್ನೆ ಮಾಡದೆ ಸಹಾಯ ಮಾಡಲು ಮುಂದಾಗುತ್ತಾರೆ. ಇದೇ ನಮ್ಮ ಸುಂದರವಾದ, ಶಾಂತಿಯ, ಸೌಹಾರ್ದತೆಯ ಭಾರತ ಎಂದರು.  ಭಾರತ್​​​ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯಲಿದೆ. ಯಾವುದೇ ಶಕ್ತಿ ಪಾದಯಾತ್ರೆಯನ್ನು‌ ನಿಲ್ಲಿಸಲು ಸಾಧ್ಯವಿಲ್ಲ. ಇದು ಭಾರತದ ಯಾತ್ರೆ ಎಂದರು. ದಾರಿಯುದ್ದಕ್ಕೂ ಜನರು ಭೇಟಿ ಮಾಡಿ ನೋವು, ನಿರುದ್ಯೋಗ, ಬೆಲೆ ಏರಿಕೆ, ರೈತರ ಮೇಲೆ ಆಗುತ್ತಿರುವ ಅನ್ಯಾಯದ ಬಗ್ಗೆ ತಿಳಿಸುತ್ತಿದ್ದಾರೆ. ಜನರು ತಮ್ಮ ನೋವು, ದುಃಖಗಳನ್ನು ಹೇಳುತ್ತಿದ್ದಾರೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments