Webdunia - Bharat's app for daily news and videos

Install App

‘ಭಾರತ್ ಜೋಡೋ ಯಾತ್ರೆ ಪ್ಲಾಫ್‌ ಆಗಿದೆ’

Webdunia
ಭಾನುವಾರ, 16 ಅಕ್ಟೋಬರ್ 2022 (16:17 IST)
ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಟಾಂಗ್​​ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಪ್ಲಾಪ್ ಆಗಿದೆ, ಇದು ಭಾರತ್ ಜೋಡೋ ಯಾತ್ರೆ ಅಲ್ಲ, ‘ಕೈ’ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ ಅವರನ್ನ ಒಂದುಗೂಡಿಸೋ‌ದೇ ಜೋಡೋ ಯಾತ್ರೆಯಾಗಿದೆ. ಭಾರತ್ ಜೋಡೋದಿಂದ ರಾಹುಲ್ ಗಾಂಧಿಗೆ ಮುಂಜಾನೆ ಸಂಜೆ ವಾಕಿಂಗ್ ಆಗ್ತಿದೆ ಎಂದರು. ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಅರುಣ್ ಸಿಂಗ್ ಶಾಂಕಿಗ್ ಸ್ಟೇಟಮೇಂಟ್‌ ನೀಡಿದ್ದು, ಬಸನಗೌಡ ಯತ್ನಾಳ, ಅರವಿಂದ್ ಬೆಲ್ಲದ್, ಬಿಜೆಪಿ ನಾಯಕರಲ್ಲ, ಕೋರ್​ಕಮಿಟಿಯಲ್ಲಿ ಯತ್ನಾಳ್​ ಇಲ್ಲ ಅವರಿಗೆ ಶೋಕಾಸ್ ನೋಟೀಸ್ ಕೊಡಲಾಗಿದೆ. ಶಿಸ್ತು ಕಮಿಟಿ ಅವರ ಬಗ್ಗೆ ಕ್ರಮ ಕೈಗೊಳ್ಳತ್ತೆ ಎಂದರು. ಜನರಿಗೆ ಜಗಳದಿಂದ ಕೂಡಿದ ಸರಕಾರ ಬೇಡವಾಗಿದೆ. ಬಡ ರೈತರ ಪರವಾಗಿ ಬೆಜೆಪಿ ಕೆಲಸ‌ ಮಾಡುತ್ತಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಸರಕಾರ ಪದೇ ಪದೇ ಅಧಿಕಾರಕ್ಕೆ ಬರುತ್ತಿದ್ದು, ಕರ್ನಾಟಕದಲ್ಲೂ ಇದೇ ಪುನಾರಾವರ್ತನೆಯಾಗುತ್ತದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments