Webdunia - Bharat's app for daily news and videos

Install App

ಜನವರಿ 8 ಮತ್ತು 9 ರಂದು ಭಾರತ್ ಬಂದ್‍

Webdunia
ಭಾನುವಾರ, 6 ಜನವರಿ 2019 (14:29 IST)
ಬೆಂಗಳೂರು : ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ ಗೆ ಕರೆಕೊಟ್ಟಿದೆ.


ಮೋಟಾರು ವಾಹನ ತಿದ್ದುಪಡಿ ಮಸೂದೆ -2017ರನ್ನು ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನ ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜಾರಿಗೊಳಿಸಲು ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ಬಂದ್‍ ಗೆ ಕರೆ ಕೊಟ್ಟಿದೆ. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಸಂಜೆ 5 ಗಂಟೆಯವರೆಗೂ ಬಂದ್ ನಡೆಯಲಿದೆ ಎಂದು ತಿಳಿದುಬಂದಿದೆ


ಅಂದು ಬಿಎಂಟಿಸಿ ಹಾಗೂ ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‍ ಗಳು ಸ್ತಬ್ಧವಾಗಲಿದೆ ಅಂತ ಸಿಐಟಿಯು ಉಪಾಧ್ಯಕ್ಷ ಅನಂತ್ ಸುಬ್ಬರಾವ್ ಹೇಳಿದ್ದಾರೆ. ಹಾಗೇ ಆಟೋ ಓಲಾ ಮತ್ತು ಊಬರ್ ಕ್ಯಾಬ್‍ಗಳು ಸಿಗುವುದಿಲ್ಲ. ಮುಷ್ಕರದಲ್ಲಿ ಬ್ಯಾಂಕ್ ನೌಕರರು ಕೂಡ ಪಾಲ್ಗೊಳ್ಳಲಿರುವುದರಿಂದ  ಬ್ಯಾಂಕ್ ಸೇವೆಯಲ್ಲೂ ವ್ಯತ್ಯಯವಾಗುವ ಸಾಧ್ಯತೆಗಳು ಇವೆ. ಎಪಿಎಂಸಿ ಲಾರಿ ಸಿಬ್ಬಂದಿ ಪಾಲ್ಗೊಳ್ಳುವುದರಿಂದ ಎಪಿಎಂಸಿ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ. ಇನ್ನೂ ಶಾಲಾ ಕಾಲೇಜುಗಳ ವಾಹನಗಳು ಸ್ತಬ್ಧವಾಗುವುದರಿಂದ ಆಯಾಯ ಜಿಲ್ಲಾಧಿಕಾರಿಗಳು ಶಾಲಾ -ಕಾಲೇಜು ಬಂದ್ ನಿರ್ಣಯ ಕೈಗೊಳ್ಳಲಿದ್ದಾರೆ.


ಆದರೆ ಆಸ್ಪತ್ರೆಗಳು, ಮೆಡಿಕಲ್ ಶಾಪ್, ಅಂಗಡಿ ಮುಂಗಟ್ಟುಗಳು ಇರುತ್ತದೆ. ಜೊತೆಗೆ ಅಂಬುಲೆನ್ಸ್ ಸೇವೆ, ಮೆಟ್ರೋ ಮತ್ತು ರೈಲು ಸೇವೆ ಇರಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments