Select Your Language

Notifications

webdunia
webdunia
webdunia
webdunia

ಭಾರತ ಬಂದ್ ಹಿನ್ನಲೆ; ಮುಚ್ಚಿದ ಅಂಗಡಿಗಳಲ್ಲಿ ಕಳ್ಳರ ಕೈಚಳಕ

ಭಾರತ ಬಂದ್ ಹಿನ್ನಲೆ; ಮುಚ್ಚಿದ ಅಂಗಡಿಗಳಲ್ಲಿ ಕಳ್ಳರ ಕೈಚಳಕ
ಹುಬ್ಬಳ್ಳಿ , ಬುಧವಾರ, 9 ಜನವರಿ 2019 (10:41 IST)
ಹುಬ್ಬಳ್ಳಿ : ಭಾರತ ಬಂದ್ ಹಿನ್ನಲೆಯಲ್ಲಿ ಇದನ್ನೇ  ಬಂಡವಾಳವಾಗಿಸಿಕೊಂಡ ಕಳ್ಳರು ಮುಚ್ಚಿದ 16 ಅಂಗಡಿಗಳನ್ನು ಒಂದೇ ದಿನದಲ್ಲಿ  ಕನ್ನ ಹಾಕಿದ್ದಾರೆ.


ವಿವಿಧ ಬೇಡಿಕೆ ಈಡೇರಿಕೆಗಾಗಿ ಕಾರ್ಮಿಕ ವರ್ಗ ಎರಡು ದಿನ ಮುಷ್ಕರಕ್ಕೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಎಪಿಎಂಸಿ  ವರ್ತಕರು ಮತ್ತು ಕಾರ್ಮಿಕರು ಬಂದ್ ಗೆ ಬೆಂಬಲ ಸೂಚಿಸಿ ತಮ್ಮ ಅಂಗಡಿಗಳನ್ನು ಮುಚ್ಚಿದ್ದರು.


ಇದನ್ನೇ ಬಂಡವಾಳವಾಗಿಸಿಕೊಂಡ ಕಳ್ಳರು ಅಮರಗೋಳ ಎಪಿಎಂಸಿಯಲ್ಲಿ 16 ಅಂಗಡಿಗಳಿಗೆ ಕನ್ನ ಹಾಕಿ ಸುಮಾರು 7 ಲಕ್ಷಕ್ಕೂ ಅಧಿಕ ಹಣ ಕದ್ದು ಪರಾರಿಯಾಗಿದ್ದಾರೆ. ಈ ದೃಶ್ಯ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

15 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ತಂದೆ