Webdunia - Bharat's app for daily news and videos

Install App

ಶಿಗ್ಗಾಂವಿಯಲ್ಲಿ ಸೋಲಿನ ಹತಾಶೆಯಲ್ಲಿ ಕಾರು ಹತ್ತಿ ಹೊರಟೇ ಬಿಟ್ಟ ಭರತ್ ಬೊಮ್ಮಾಯಿ

Krishnaveni K
ಶನಿವಾರ, 23 ನವೆಂಬರ್ 2024 (12:22 IST)
ಶಿಗ್ಗಾಂವಿ: ಉಪಚುನಾವಣೆಯಲ್ಲಿ ತಂದೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದ ಭರತ್ ಬೊಮ್ಮಾಯಿಗೆ ಶಿಗ್ಗಾಂವಿಯಲ್ಲಿ ಹಿನ್ನಡೆಯಾಗಿದೆ. ಸೋಲಿನ ಅರಿವಾಗುತ್ತಿದ್ದಂತೇ ಅವರು ಕಾರು ಹತ್ತಿ ಹೊರಟಿದ್ದಾರೆ.

ಶಿಗ್ಗಾಂವಿ ಮತ ಎಣಿಕೆ ಕೇಂದ್ರದಲ್ಲಿ ಫಲಿತಾಂಶಕ್ಕಾಗಿ ಕಾಯುತ್ತಿದ್ದ ಭರತ್ ಬೊಮ್ಮಾಯಿಗೆ ಕಾರ್ಯಕರ್ತರೂ ಸಾಥ್ ನೀಡಿದ್ದರು. ಈ ಬಾರಿ ಗೆಲ್ಲಬಹುದು ಎಂದೇ ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಗೆಲುವಿನತ್ತ ಮುಖ ಮಾಡಿದ್ದಾರೆ. ತಮಗೆ ಸೋಲಾಗುತ್ತದೆ ಎಂದು ಅರಿವಾಗುತ್ತಿದ್ದಂತೇ ಭರತ್ ಹತಾಶರಾದರು.

ತಮ್ಮ ಕಾರು ಹತ್ತಿ ಅಲ್ಲಿಂದ ಹೊರಟೇ ಹೋಗಿದ್ದಾರೆ. ಈ ವೇಳೆ ಕಾರ್ಯಕರ್ತರೂ ಬೇಸರವಿತ್ತು. ತಮ್ಮ ನಾಯಕನನ್ನು ಗೆಲ್ಲಿಸಲಾಗಲಿಲ್ಲ ಎಂಬ ಬೇಸರ ಕಾರ್ಯಕರ್ತರಲ್ಲಿತ್ತು. ಇನ್ನೊಂದೆಡೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.

ಕಾಂಗ್ರೆಸ್ ಗೆ ಇದು ಅಭೂತಪೂರ್ವ ಗೆಲುವು. ಇಲ್ಲಿ ಕೊನೆಯ ಕ್ಷಣದಲ್ಲಿ ಪಠಾಣ್ ರನ್ನು ತಂದು ನಿಲ್ಲಿಸಲಾಗಿತ್ತು. ಜೊತೆಗೆ ಸ್ಥಳೀಯ ನಾಯಕರ ವಿರೋಧವಿತ್ತು. ಹಾಗಿದ್ದರೂ ಜಮೀರ್ ಅಹ್ಮದ್ ಒತ್ತಾಸೆ ಮೇರೆಗೆ ಪಠಾಣ್ ಗೆ ಟಿಕೆಟ್ ನೀಡಲಾಗಿತ್ತು. ಈ ಯೋಜನೆ ಕಾಂಗ್ರೆಸ್ ಗೆ ವರ್ಕೌಟ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments