ಕಮಲ’ ಹಿಡಿದ ಭಾಸ್ಕರ್ ರಾವ್

Webdunia
ಬುಧವಾರ, 1 ಮಾರ್ಚ್ 2023 (15:08 IST)
ಎಎಪಿ ಸೇರಿ ಛಾಪು ಮೂಡಿಸಿದ್ದ ಸ್ವಯಂ ನಿವೃತ್ತಿ ಪಡೆದ ಐಪಿಎಸ್‌ ಅಧಿಕಾರಿ ಭಾಸ್ಕರ್​ ರಾವ್​​​​ ಎಎಪಿಗೆ ಗುಡ್‌ಬೈ ಹೇಳಿದ್ದಾರೆ. ಇಂದು ಭಾಸ್ಕರ್‌ ರಾವ್‌ ಬಿಜೆಪಿಗೆ ಸೇರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಎಎಪಿ ತೊರೆದ ಭಾಸ್ಕರ್‌ ರಾವ್‌ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿದ್ದಾರೆ. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ್ ರಾವ್ ಅವರನ್ನು ನಳಿನ್‌ ಕುಮಾರ್ ಕಟೀಲ್‌ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಭಾಸ್ಕರ್‌ ರಾವ್‌ ಅವರ ಜೊತೆ ಅವರ ಬೆಂಬಲಿಗರು ಸಹ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆ ಬಳಿಕ ಪ್ರತಿಕ್ರಿಯೆ ನೀಡಿದ ಭಾಸ್ಕರ್‌ ರಾವ್‌, ವಿಆರ್‌ಎಸ್‌ ತೆಗೆದುಕೊಂಡು ರಾಜಕೀಯ ಬದಲಾವಣೆಗೆ ಹೊರಟಿದ್ದೆ. ಆದರೆ, ಎಎಪಿ‌ ಕರ್ನಾಟಕದಲ್ಲಿ ಬೆಳೆಯುತ್ತಿಲ್ಲ. ಅವರ ಕಾರ್ಯವೈಖರಿ ಶೈಲಿಯಿಂದ ಬೆಳವಣಿಗೆ ಸಾಧ್ಯವಾಗುತ್ತಿಲ್ಲ. ಈಗ ನಾನು ಸನಾತನ ಧರ್ಮದ ಪಕ್ಷ, ರಾಷ್ಟ್ರೀಯತೆಯನ್ನ ಅಳವಾಗಿ ಮೈಗೂಡಿಸಿಕೊಂಡಿರುವ ಪಕ್ಷ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಬಾಲ್ಯದಿಂದಲೂ ಸನಾತನ ಧರ್ಮ, ರಾಷ್ಟ್ರೀಯತೆಗೆ ನಾನು ಬದ್ಧವಾಗಿದ್ದೇನೆ. ಹಾಗಾಗಿ ನಾನು ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದು ಭಾಸ್ಕರ್‌ ರಾವ್‌ ಹೇಳಿಕೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮುಂದಿನ ಸುದ್ದಿ
Show comments