ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಾಕ್ಷಿಗಳ ವಿಚಾರಣೆ

Webdunia
ಸೋಮವಾರ, 2 ಜುಲೈ 2018 (18:26 IST)
ರಾಜ್ಯವನ್ನೇ ಬೆಚ್ಚಿ ಬೀಳಿಸಿ, ಬಾರಿ ಸುದ್ದಿ ಮಾಡಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ  ಇಂದು  ಆರಂಭಗೊಂಡಿದೆ.
 
ಜು. 2, 3, 4, 5, 6 ಮತ್ತು 16, 17, 18 ಮತ್ತು 19ರಂದು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 167 ಸಾಕ್ಷಿಗಳ ಪೈಕಿ 44 ಮಂದಿ ಸಾಕ್ಷಿಗಳ ವಿಚಾರಣೆ ನಡೆಯಿತು.
 
ಜಿಲ್ಲಾ ಸರಕಾರಿ ಹಿರಿಯ ಅಭಿಯೋಜಕಿ ಶಾಂತಿಬಾಯಿ ಮೊದಲ ದಿನದ ವಾದದಲ್ಲಿ ಜು. ೨ ಪ್ರಕರಣದ ಪ್ರಮುಖ ಸಾಕ್ಷಿ ಹಾಗೂ ದೂರುದಾರರಾದ ಮೃತ ಭಾಸ್ಕರ್ ಶೆಟ್ಟಿಯ ತಾಯಿ ಗುಲಾಬಿ ಶೆಡ್ತಿ ಅವರ ಹೇಳಿಕೆ ಪಡೆದುಕೊಂಡಿದ್ದಾರೆ.
 
ಪ್ರಕರಣದ ಲ್ಲಿ ಬಂಧಿತರಾಗಿರುವ ಭಾಸ್ಕರ್ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ(50), ಮಗ ನವನೀತ್ ಶೆಟ್ಟಿ(20) ಹಾಗೂ ನಂದಳಿಕೆಯ ನಿರಂಜನ್ ಭಟ್(26) ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
 
ವಿಚಾರಣೆ ವೇಳೆ ಇವರನ್ನು ಕರೆದು ತರುವ ಸಾಧ್ಯತೆ ಇಲ್ಲದ ಕಾರಣ  ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸಲಾಯಿತು
 
ಸಾಕ್ಷನಾಶ ಆರೋಪಿಗಳಾಗಿರುವ ಶ್ರೀನಿವಾಸ ಭಟ್(56) ಹಾಗೂ ಕಾರು ಚಾಲಕ ರಾಘವೇಂದ್ರ(26) ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಕರಣದ ವಿಚಾರಣೆಯ ಸಂದರ್ಭ ಕೋರ್ಟ್ನ ಅವರಣದ ಹೊರಗೂ ಒಳಗೂ ಬಾರೀ ಪೋಲಿಸ್ ಬಿಗಿ ಭದ್ರತೆ ಒದಗಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂವರು ಮಕ್ಕಳನ್ನು ಕೊಂದು ಸಾವಿಗೂ ಯತ್ನಿಸಿದ ತಾಯಿ, ಮುಂದೇನಾಯ್ತು

ಬಲೂಚಿಸ್ತಾನದಲ್ಲಿ 145ಜನರನ್ನು ಕೊಂದು ಪ್ರತೀಕಾರ ತೀರಿಸಿಕೊಂಡ ಪಾಕ್‌

ಸಿಜೆ ರಾಯ್ ಸಾವು, ಮಹತ್ವದ ತನಿಖೆ ಹಂತದಲ್ಲೇ ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬರೀ ಚೊಂಬು: ಸಿಎಂ ಸಿದ್ದರಾಮಯ್ಯ

ಇನ್ನೇನು ಮದುವೆ ಆಗುಬೇಕೆನ್ನುಷ್ಟರಲ್ಲಿ ವರನಿಗೆ ಚಾಕು ಇರಿತ, ತನಿಖೆ ಶುರು ಮಾಡಿದ ಖಾಕಿಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments