Webdunia - Bharat's app for daily news and videos

Install App

ಕೊರೊನಾ ವೈರಸ್ ಭೀತಿಗೆ ಭಟ್ಕಳ ಸಂಪೂರ್ಣ ಬಂದ್

Webdunia
ಸೋಮವಾರ, 23 ಮಾರ್ಚ್ 2020 (19:29 IST)
ವಿದೇಶಗಳಿಂದ ಹೆಚ್ಚಾಗಿ ಜನರು ಭಟ್ಕಳಕ್ಕೆ ವಾಪಸ್ ಆಗುತ್ತಿದ್ದಾರೆ. ಹೀಗಾಗಿ ಭಟ್ಕಳ್ ದಲ್ಲಿ ಸಂಪೂರ್ಣ ಬಂದ್ ಮಾಡಲಾಗಿದೆ.

ಕಾರವಾರದ ಭಟ್ಕಳ ತಾಲೂಕಿಗೆ ವಿದೇಶದಿಂದ ಬಂದಿರುವವರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಭಟ್ಕಳ ಉಪವಿಭಾಗದಲ್ಲಿ ಕಲಂ 144 ಜಾರಿಮಾಡಿ ಸಂಪರ್ಕವನ್ನ ಸಂಪೂರ್ಣ ಬಂದ್ ಮಾಡುವ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್ ಹೇಳಿದ್ದಾರೆ.

ಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರವನ್ನು ಕೈಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ ಅಥವಾ ಭಟ್ಕಳಕ್ಕೆ ಯಾವುದೇ ತೊಂದರೆ ಇರುವುದಿಲ್ಲಾ.  ಜನರು ಆತಂಕ ಪಡುವ ಸನ್ನಿವೇಶವಿಲ್ಲ. ಭಟ್ಕಳ ಭಾಗದಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾದದ್ದು. ವಿದೇಶದಿಂದ ಬಂದ ಯುವಕ ಭಟ್ಕಳ ಊರಿನವನಾಗಿದ್ದು, ಆ ಯುವಕನನ್ನು ಭಟ್ಕಳಕ್ಕೆ ಬರುವ ಮೊದಲೇ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಯಾರೂ ಭಯಪಡುವ ಅವಶ್ಯಕತೆಯಿಲ್ಲಾ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದಾರೆ.

ಇದುವರೆಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಕ್ಕೆ ಹೋಗಿಬಂದವರಿದ್ದಾರೆ ಆದ್ದರಿಂದ ಮುನ್ನೆಚ್ಚರಿಕಾ ದೃಷ್ಟಿಯಿಂದ ಪ್ರತಿನಿತ್ಯ ಎರಡು ಬಾರಿ ಅವರನ್ನ ತಪಾಸಣೆ ಮಾಡಲಾಗುತ್ತಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments