ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

Sampriya
ಬುಧವಾರ, 30 ಜುಲೈ 2025 (19:04 IST)
Photo Credit X
ಕಾರವಾರ(ಉತ್ತರ ಕನ್ನಡ): ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಮಹಾಸತಿ ಎಂಬ ಗಿಲ್​ನೆಟ್ ನಾಡದೋಣಿ ಅಲೆಗಳ ಅಬ್ಬರಕ್ಕೆ ಮಗುಚಿ ನಾಲ್ವರು ಮೀನುಗಾರರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಮನೋಹರ ಎಂಬವರಿಗೆ ಸೇರಿದ ದೋಣಿಯಲ್ಲಿ ಒಟ್ಟು ಆರು ಮೀನುಗಾರರು ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದರು. 

ಸಮುದ್ರದಲ್ಲಿನ ಭಾರಿ ಅಲೆಗಳಿಗೆ ಸಿಲುಕಿದ ದೋಣಿ ಪಲ್ಟಿಯಾಗಿದ್ದು, ನಾಲ್ವರೂ ನೀರು ಪಾಲಾಗಿದ್ದವರು, ಸಾವನ್ನಪ್ಪಿದ್ದಾರೆ. ಈ ವೇಳೆ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

ದೋಣಿ ಮಗುಚಿದ ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣಾ ಕಾರ್ಯಾಚರಣೆ ನಡೆಸಿ ಮನೋಹರ ಮೊಗೇರ ಮತ್ತು ರಾಮಾ ಖಾರ್ವಿ ಅವರನ್ನು ರಕ್ಷಿಸಿದ್ದಾರೆ. ಆದರೆ, ರಾಮಕೃಷ್ಣ ಮೊಗೇರ, ಸತೀಶ ಮೊಗೇರ, ಗಣೇಶ ಮೊಗೇರ ಮತ್ತು ನಿಶ್ಚಿತ್ ಮೊಗೇರ ಎಂಬ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದರು.

ಪಲ್ಟಿಯಾದ ದೋಣಿ ಅಳ್ವೇಕೋಡಿ ಬ್ರೇಕ್ ವಾಟರ್ ಬಳಿ ಪತ್ತೆಯಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments