Webdunia - Bharat's app for daily news and videos

Install App

ಕ್ಯಾನ್ಸರ್ ಇದೆ, ನಿರೀಕ್ಷಣಾ ಜಾಮೀನು ನೀಡಿ ಎಂದು ಕೋರ್ಟ್ ಮೆಟ್ಟಿಲೇರಿದ್ದ ಭವಾನಿ ರೇವಣ್ಣ

Krishnaveni K
ಶನಿವಾರ, 1 ಜೂನ್ 2024 (09:44 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಈಗ ತಮಗೆ ಕ್ಯಾನ್ಸರ್ ಕಾಯಿಲೆ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಿ ಎಂದು ವಕೀಲರ ಮೂಲಕ ಕೋರ್ಟ್ ಗೆ ಮನವಿ ಮಾಡಿದ್ದರು.

ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎರಡೆರಡು ಬಾರಿ ನೋಟಿಸ್ ನೀಡಿದರೂ ಭವಾನಿ ರೇವಣ್ಣ ಹಾಜರಾಗಿರಲಿಲ್ಲ. ಅವರ ಜಾಮೀನು ಅರ್ಜಿಯೂ ಮೊನ್ನೆ ತಿರಸ್ಕೃತವಾಗಿತ್ತು. ಇತ್ತ ಪುತ್ರ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿದ್ದರೂ ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬುದು ನಿಗೂಢವಾಗಿಯೇ ಇತ್ತು.

ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣ ಪರ ಅವರ ವಕೀಲರು ಅವರಿಗೆ ಕ್ಯಾನ್ಸರ್ ಕಾಯಿಲೆ ಇದೆ. ಹೀಗಾಗಿ ಆರೋಗ್ಯದ ದೃಷ್ಟಿಯಿಂದ ನಿರೀಕ್ಷಣಾ ಜಾಮೀನು ನೀಡಿ ಎಂದು ಕೋರ್ಟ್ ಮುಂದೆ ವಾದ ಮಂಡಿಸಿದ್ದರು. ಆದರೆ ಕೋರ್ಟ್ ಜಾಮೀನು ನಿರಾಕರಿಸಿತ್ತು.

ಈ ನಡುವೆ ಇಂದು ಬೆಳಿಗ್ಗೆ 10 ಗಂಟೆಯ ಬಳಿಕ ಭವಾನಿಗೆ ಮನೆಯಲ್ಲಿಯೇ ಇರಲು ಸೂಚಿಸಿರುವ ಎಸ್ಐಟಿ ತಂಡ ಅಲ್ಲಿಯೇ ವಿಚಾರಣೆ ನಡೆಸುವುದಾಗಿ ಹೇಳಿದೆ. ಈ ವೇಳೆ ಅವರು ಬಂಧನಕ್ಕೊಳಗಾಗುವ ಸಾಧ್ಯತೆಯೂ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ