Webdunia - Bharat's app for daily news and videos

Install App

ಕ್ಯಾನ್ಸರ್ ಇದೆ, ನಿರೀಕ್ಷಣಾ ಜಾಮೀನು ನೀಡಿ ಎಂದು ಕೋರ್ಟ್ ಮೆಟ್ಟಿಲೇರಿದ್ದ ಭವಾನಿ ರೇವಣ್ಣ

Krishnaveni K
ಶನಿವಾರ, 1 ಜೂನ್ 2024 (09:44 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಈಗ ತಮಗೆ ಕ್ಯಾನ್ಸರ್ ಕಾಯಿಲೆ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಿ ಎಂದು ವಕೀಲರ ಮೂಲಕ ಕೋರ್ಟ್ ಗೆ ಮನವಿ ಮಾಡಿದ್ದರು.

ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎರಡೆರಡು ಬಾರಿ ನೋಟಿಸ್ ನೀಡಿದರೂ ಭವಾನಿ ರೇವಣ್ಣ ಹಾಜರಾಗಿರಲಿಲ್ಲ. ಅವರ ಜಾಮೀನು ಅರ್ಜಿಯೂ ಮೊನ್ನೆ ತಿರಸ್ಕೃತವಾಗಿತ್ತು. ಇತ್ತ ಪುತ್ರ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿದ್ದರೂ ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬುದು ನಿಗೂಢವಾಗಿಯೇ ಇತ್ತು.

ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಭವಾನಿ ರೇವಣ್ಣ ಪರ ಅವರ ವಕೀಲರು ಅವರಿಗೆ ಕ್ಯಾನ್ಸರ್ ಕಾಯಿಲೆ ಇದೆ. ಹೀಗಾಗಿ ಆರೋಗ್ಯದ ದೃಷ್ಟಿಯಿಂದ ನಿರೀಕ್ಷಣಾ ಜಾಮೀನು ನೀಡಿ ಎಂದು ಕೋರ್ಟ್ ಮುಂದೆ ವಾದ ಮಂಡಿಸಿದ್ದರು. ಆದರೆ ಕೋರ್ಟ್ ಜಾಮೀನು ನಿರಾಕರಿಸಿತ್ತು.

ಈ ನಡುವೆ ಇಂದು ಬೆಳಿಗ್ಗೆ 10 ಗಂಟೆಯ ಬಳಿಕ ಭವಾನಿಗೆ ಮನೆಯಲ್ಲಿಯೇ ಇರಲು ಸೂಚಿಸಿರುವ ಎಸ್ಐಟಿ ತಂಡ ಅಲ್ಲಿಯೇ ವಿಚಾರಣೆ ನಡೆಸುವುದಾಗಿ ಹೇಳಿದೆ. ಈ ವೇಳೆ ಅವರು ಬಂಧನಕ್ಕೊಳಗಾಗುವ ಸಾಧ್ಯತೆಯೂ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ