ಭವಾನಿ ರೇವಣ್ಣ ವಿಚಾರಣೆಗೆ ಬಂದ ಎಸ್ಐಟಿ: ಎಲ್ಲಿ ಹೋದರಪ್ಪಾ ಕೋಟಿ ಕಾರಿನ ಒಡತಿ

Krishnaveni K
ಶನಿವಾರ, 1 ಜೂನ್ 2024 (12:34 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣರನ್ನು ವಿಚಾರಣೆ ಮಾಡಲು ಎಸ್ಐಟಿ ತಂಡ ಅವರ ನಿವಾಸಕ್ಕೆ ಆಗಮಿಸಿದೆ.

ಪ್ರಜ್ವಲ್ ರೇವಣ್ಣರಿಂದ ಕಿರುಕುಳಕ್ಕೊಳಗಾದ ಮಹಿಳೆಯನ್ನು ರೇವಣ್ಣ ದಂಪತಿ ಆದೇಶದ ಮೇರೆ ಭವಾನಿ ರೇವಣ್ಣ ಸಂಬಂಧಿ ಅಪಹರಣ ಮಾಡಿದ್ದರು ಎಂಬ ಆರೋಪವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಚ್ ಡಿ ರೇವಣ್ಣ ಬಂಧನಕ್ಕೊಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಭವಾನಿ ರೇವಣ್ಣ ಸಂಬಂಧಿಯೂ ಬಂಧನಕ್ಕೊಳಗಾಗಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗಲು ಭವಾನಿಗೆ ಎಸ್ಐಟಿ ತಂಡ ಎರಡು ಬಾರಿ ನೋಟಿಸ್ ನೀಡಿತ್ತು. ಪುತ್ರ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧನಕ್ಕೊಳಗಾಗುತ್ತಿದ್ದಂತೇ ಭವಾನಿಗೂ ಬಂಧನದ ಭೀತಿ ಎದುರಾಗಿತ್ತು. ಆದರೆ ಭವಾನಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.

ಆದರೆ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಬೆನ್ನಲ್ಲೇ ಎಸ್ಐಟಿ ಇಂದು ವಿಚಾರಣೆಗೆ ಕರೆ ನೀಡಿದೆ. ಭವಾನಿ ರೇವಣ್ಣ ಆರೋಗ್ಯ ಸಮಸ್ಯೆಯಿದೆ ಎಂದು ಹೇಳಿದ ಕಾರಣಕ್ಕೆ ಸ್ವತಃ ಎಸ್ಐಟಿ ತಂಡ ಅವರ ಹೊಳೆನರಸೀಪುರ ನಿವಾಸಕ್ಕೆ ವಿಚಾರಣೆಗೆ ಬರುವುದಾಗಿ ತಿಳಿಸಿತ್ತು. ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಮಯವನ್ನೂ ಕೇಳಿದೆ.

ಆದರೆ ಹೊಳೆನರಸೀಪುರ ನಿವಾಸಕ್ಕೆ ಎಸ್ಐಟಿ ತಂಡ ಆಗಮಿಸಿದೆ. ಆದರೆ ಅಲ್ಲಿ ಭವಾನಿ ರೇವಣ್ಣ ಸುಳಿವಿಲ್ಲ. ಸಂಜೆ 5 ಗಂಟೆಯವರೆಗೆ ಸಮಯಾವಕಾಶವಿದ್ದು, ಅದಾದ ಬಳಿಕ ವಿಚಾರಣೆ ಎದುರಿಸಲು ವಿಫಲರಾದರೆ ಭವಾನಿ ಬಂಧನಕ್ಕೊಳಗಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ