ಭವಾನಿ ರೇವಣ್ಣಗೆ ಕೋಟಿ ಕಾರಿನ ದೌಲತ್ತು ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ ನೆಟ್ಟಿಗರು

Krishnaveni K
ಶುಕ್ರವಾರ, 5 ಜುಲೈ 2024 (09:54 IST)
ಬೆಂಗಳೂರು: ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಮಕ್ಕಳನ್ನು ನೋಡಲು ಭವಾನಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು. ಭವಾನಿ ರೇವಣ್ಣ ಕಾರಿನಲ್ಲಿ ಹೋಗುವ ದೃಶ್ಯ ನೋಡಿ ನೆಟ್ಟಿಗರು ಒಂದು ಕೋಟಿ ರೂ. ಕಾರಿನ ದೌಲತ್ತು ಎಲ್ಲಿ ಹೋಯ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಭವಾನಿ ರೇವಣ್ಣ ಮೊನ್ನೆಯಷ್ಟೇ ಪುತ್ರ ಪ್ರಜ್ವಲ್ ಮತ್ತು ಸೂರಜ್ ರನ್ನು ನೋಡಲು ಜೈಲಿಗೆ ಹೋಗಿದ್ದರು. ಪ್ರಜ್ವಲ್ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ ಇತ್ತ ಸೂರಜ್ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೊಳಗಾಗಿದ್ದಾರೆ.

ಇಬ್ಬರನ್ನೂ ನೋಡಲು ಭವಾನಿ ರೇವಣ್ಣ ಕಾರಿನಲ್ಲಿ ಬಂದಾಗ ಮಾಧ್ಯಮಗಳ ಕ್ಯಾಮರಾ ಕಣ್ಣುಗಳನ್ನು ಅವರನ್ನು ಸೆರೆ ಹಿಡಿದಿದ್ದವು. ಆದರೆ ಮಾಧ್ಯಮಗಳ ಕಣ್ಣಿನಿಂದ ತಪ್ಪಿಸಿಕೊಳ್ಳಲು ಭವಾನಿ ರೇವಣ್ಣ ಮುಖ ಮುಚ್ಚಿ ಕೂತಿದ್ದರು. ಈ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನು ನೋಡಿ ನೆಟ್ಟಿಗರು ಒಂದು ಕೋಟಿ ಕಾರಿನ ದೌಲತ್ತು ಈಗ ಇಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಭವಾನಿ ರೇವಣ್ಣ ತಮ್ಮ ಕಾರಿಗೆ ವ್ಯಕ್ತಿಯೊಬ್ಬನ ಬೈಕ್ ಗುದ್ದಿದ್ದಕ್ಕೆ ಆತನಿಗೆ ಈ ಕಾರಿಗೆ 1 ಕೋಟಿ ರೂ. ಕೊಟ್ಟಿದ್ದೇನೆ. ಸಾಯಲು ನನ್ನ ಕಾರೇ ಬೇಕಾಗಿತ್ತಾ ಎಂದು ಆವಾಜ್ ಹಾಕಿದ್ದರು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆಗ ಭವಾನಿ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಇಡೀ ಕುಟುಂಬವೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಕ್ಕು ನರಳಾಡುತ್ತಿದೆ. ಇತ್ತ ಭವಾನಿ ರೇವಣ್ಣ ಕೂಡಾ ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ನೆಟ್ಟಿಗರು ಅವರನ್ನು ಹಳೆಯ ಘಟನೆ ನೆನಪಿಸಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ