Webdunia - Bharat's app for daily news and videos

Install App

ಭವಾನಿ ರೇವಣ್ಣಗೆ ಕೋಟಿ ಕಾರಿನ ದೌಲತ್ತು ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ ನೆಟ್ಟಿಗರು

Krishnaveni K
ಶುಕ್ರವಾರ, 5 ಜುಲೈ 2024 (09:54 IST)
ಬೆಂಗಳೂರು: ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಮಕ್ಕಳನ್ನು ನೋಡಲು ಭವಾನಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು. ಭವಾನಿ ರೇವಣ್ಣ ಕಾರಿನಲ್ಲಿ ಹೋಗುವ ದೃಶ್ಯ ನೋಡಿ ನೆಟ್ಟಿಗರು ಒಂದು ಕೋಟಿ ರೂ. ಕಾರಿನ ದೌಲತ್ತು ಎಲ್ಲಿ ಹೋಯ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಭವಾನಿ ರೇವಣ್ಣ ಮೊನ್ನೆಯಷ್ಟೇ ಪುತ್ರ ಪ್ರಜ್ವಲ್ ಮತ್ತು ಸೂರಜ್ ರನ್ನು ನೋಡಲು ಜೈಲಿಗೆ ಹೋಗಿದ್ದರು. ಪ್ರಜ್ವಲ್ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ ಇತ್ತ ಸೂರಜ್ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೊಳಗಾಗಿದ್ದಾರೆ.

ಇಬ್ಬರನ್ನೂ ನೋಡಲು ಭವಾನಿ ರೇವಣ್ಣ ಕಾರಿನಲ್ಲಿ ಬಂದಾಗ ಮಾಧ್ಯಮಗಳ ಕ್ಯಾಮರಾ ಕಣ್ಣುಗಳನ್ನು ಅವರನ್ನು ಸೆರೆ ಹಿಡಿದಿದ್ದವು. ಆದರೆ ಮಾಧ್ಯಮಗಳ ಕಣ್ಣಿನಿಂದ ತಪ್ಪಿಸಿಕೊಳ್ಳಲು ಭವಾನಿ ರೇವಣ್ಣ ಮುಖ ಮುಚ್ಚಿ ಕೂತಿದ್ದರು. ಈ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನು ನೋಡಿ ನೆಟ್ಟಿಗರು ಒಂದು ಕೋಟಿ ಕಾರಿನ ದೌಲತ್ತು ಈಗ ಇಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಭವಾನಿ ರೇವಣ್ಣ ತಮ್ಮ ಕಾರಿಗೆ ವ್ಯಕ್ತಿಯೊಬ್ಬನ ಬೈಕ್ ಗುದ್ದಿದ್ದಕ್ಕೆ ಆತನಿಗೆ ಈ ಕಾರಿಗೆ 1 ಕೋಟಿ ರೂ. ಕೊಟ್ಟಿದ್ದೇನೆ. ಸಾಯಲು ನನ್ನ ಕಾರೇ ಬೇಕಾಗಿತ್ತಾ ಎಂದು ಆವಾಜ್ ಹಾಕಿದ್ದರು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆಗ ಭವಾನಿ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಇಡೀ ಕುಟುಂಬವೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಕ್ಕು ನರಳಾಡುತ್ತಿದೆ. ಇತ್ತ ಭವಾನಿ ರೇವಣ್ಣ ಕೂಡಾ ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ನೆಟ್ಟಿಗರು ಅವರನ್ನು ಹಳೆಯ ಘಟನೆ ನೆನಪಿಸಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ