Webdunia - Bharat's app for daily news and videos

Install App

ಶೀಘ್ರದಲ್ಲೇ ಭೂ ಮಂಜೂರಾತಿ

Webdunia
ಸೋಮವಾರ, 14 ಮಾರ್ಚ್ 2022 (15:58 IST)
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಮುದಿಗೆರೆಯಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿದಾರರಿಗೆ ಶೀಘ್ರದಲ್ಲೇ ಭೂ ಮಂಜೂರಾತಿ ಪತ್ರವನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಅಶೋಕ್ ಅವರು ವಿಧಾನಸಭೆಗೆ ಉತ್ತರಿಸಿದರು.
ಶಾಸಕ ರಾಜೇಶ್‍ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶಿರಾ ತಾಲ್ಲೂಕಿನ ಮುದಿಗೆರೆ ಗ್ರಾಮದ ಸರ್ವೆ ನಂ.12ರಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಶೀಘರದಲ್ಲೇ ಸರ್ವೇ ನಡೆಸಿ ಗಡಿ ಗುರುತಿಸುವಿಕೆ ಕೆಲಸ ಮಾಡಲಾಗುವುದು. ನಂತರ ಸಾಗುವಳಿದಾರರಿಗೆ ಭೂ ಮಂಜೂರಾತಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು.
 
ಭೂ ಮಂಜೂರಾತಿ ಮಾಡುವ ಕುರಿತು ಸಮಿತಿಯನ್ನು ರಚಿಸಲಾಗಿದೆ. ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಈ ಮೊದಲು ನಮಗೆ ಸಮೀಕ್ಷೆ ನಡೆಸಲು ಸರ್ವೇಯರ್‍ಗಳ ಕೊರತೆ ಇತ್ತು. ಈಗ ನೋಂದಾಯಿತ 3 ಸಾವಿರ ಸರ್ವೇಯರ್‍ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಆದಷ್ಟು ಬೇಗ ಗಡಿ ಗುರುತಿಸುವಿಕೆ ಕಾರ್ಯ ಮುಗಿದ ನಂತರ ಉಳುಮೆಚೀಟಿಯನ್ನು ರೈತರಿಗೆ ನೀಡಲಾಗುವುದು ಎಂದರು.
 
ಇದಕ್ಕೂ ಮುನ್ನ ರಾಜೇಶ್ ಗೌಡ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಶಿರಾದ ಅನೇಕ ಕಡೆ ಅಕ್ರಮ ಸಕ್ರಮ ಯೋಜನೆಯಡಿ ಬಡವರು ಜಮೀನನ್ನು ಸಾಗುವಳಿ ಮಾಡಿಕೊಂಡಿದ್ದಾರೆ. ಆದರೆ ಅರಣ್ಯ ಮತ್ತು ಕಂದಾಯ ಇಲಾಖೆ ಅಕಾರಿಗಳ ಕಿರುಕುಳದಿಂದ ಸಾಗುವಳಿ ಚೀಟಿ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕೆಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಮುಂದಿನ ಸುದ್ದಿ
Show comments