ಶೀಘ್ರದಲ್ಲೇ ಭೂ ಮಂಜೂರಾತಿ

Webdunia
ಸೋಮವಾರ, 14 ಮಾರ್ಚ್ 2022 (15:58 IST)
ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಮುದಿಗೆರೆಯಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿದಾರರಿಗೆ ಶೀಘ್ರದಲ್ಲೇ ಭೂ ಮಂಜೂರಾತಿ ಪತ್ರವನ್ನು ನೀಡಲಾಗುವುದು ಎಂದು ಕಂದಾಯ ಸಚಿವ ಅಶೋಕ್ ಅವರು ವಿಧಾನಸಭೆಗೆ ಉತ್ತರಿಸಿದರು.
ಶಾಸಕ ರಾಜೇಶ್‍ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶಿರಾ ತಾಲ್ಲೂಕಿನ ಮುದಿಗೆರೆ ಗ್ರಾಮದ ಸರ್ವೆ ನಂ.12ರಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಶೀಘರದಲ್ಲೇ ಸರ್ವೇ ನಡೆಸಿ ಗಡಿ ಗುರುತಿಸುವಿಕೆ ಕೆಲಸ ಮಾಡಲಾಗುವುದು. ನಂತರ ಸಾಗುವಳಿದಾರರಿಗೆ ಭೂ ಮಂಜೂರಾತಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು.
 
ಭೂ ಮಂಜೂರಾತಿ ಮಾಡುವ ಕುರಿತು ಸಮಿತಿಯನ್ನು ರಚಿಸಲಾಗಿದೆ. ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಈ ಮೊದಲು ನಮಗೆ ಸಮೀಕ್ಷೆ ನಡೆಸಲು ಸರ್ವೇಯರ್‍ಗಳ ಕೊರತೆ ಇತ್ತು. ಈಗ ನೋಂದಾಯಿತ 3 ಸಾವಿರ ಸರ್ವೇಯರ್‍ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಆದಷ್ಟು ಬೇಗ ಗಡಿ ಗುರುತಿಸುವಿಕೆ ಕಾರ್ಯ ಮುಗಿದ ನಂತರ ಉಳುಮೆಚೀಟಿಯನ್ನು ರೈತರಿಗೆ ನೀಡಲಾಗುವುದು ಎಂದರು.
 
ಇದಕ್ಕೂ ಮುನ್ನ ರಾಜೇಶ್ ಗೌಡ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಶಿರಾದ ಅನೇಕ ಕಡೆ ಅಕ್ರಮ ಸಕ್ರಮ ಯೋಜನೆಯಡಿ ಬಡವರು ಜಮೀನನ್ನು ಸಾಗುವಳಿ ಮಾಡಿಕೊಂಡಿದ್ದಾರೆ. ಆದರೆ ಅರಣ್ಯ ಮತ್ತು ಕಂದಾಯ ಇಲಾಖೆ ಅಕಾರಿಗಳ ಕಿರುಕುಳದಿಂದ ಸಾಗುವಳಿ ಚೀಟಿ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕೆಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಬಿಡುಗಡೆ: ಮೋದಿ ಸರ್ಕಾರದಿಂದ ಬಡವರಿಗೆ ಗಿಫ್ಟ್

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಮುಂದಿನ ಸುದ್ದಿ
Show comments