ಎಸಿಬಿ ಬಿಜೆಪಿಯಲ್ಲಿ ದುರ್ಬಳಕೆಯಾಗುತ್ತಿದೆ...!!

Webdunia
ಗುರುವಾರ, 7 ಜುಲೈ 2022 (16:01 IST)
ಬಿಜೆಪಿ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ನಮಗೊಂದು ಕಾನೂನು, ಬಿಜೆಪಿಯವರಿಗೊಂದು ಕಾನೂನಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿ ಕಾರಿದ್ದಾರೆ.
 
ಜಮೀರ್ ಅಹಮದ್ ಖಾನ್ ವಿರುದ್ಧ ಎಸಿಬಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸ್ಪೀಕರ್ ಅನುಮತಿಯಿಲ್ಲದೆ ಶಾಸಕ ಜಮೀರ್ ಮೇಲೆ ದಾಳಿ ಮಾಡಲಾಗಿದೆ.
ಅವರ ಪಕ್ಷದವರಿಗೆ ಮಾತ್ರ ಸ್ಪೀಕರ್ ಅನುಮತಿ ಕೇಳಿದ್ದಾರೆ. ಎಸಿಬಿಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೊಂದೇ ಅಲ್ಲ ಎಲ್ಲಾ ಸ್ವಾಯತ್ತ ಸಂಸ್ಥೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
 
ಪಿಎಸ್ ಐ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ರಾಮಲಿಂಗಾರೆಡ್ಡಿ ಆಕ್ರೋಶ ಹೊರ ಹಾಕಿ, ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ. ಸಿದ್ದರಾಮಯ್ಯ ಕಾಲದಲ್ಲಿ ಅಕ್ರಮ ಅಂತಾರೆ. ಆಗ ಆಗಿದ್ದರೆ ಇವರು ಏನು ಮಾಡುತ್ತಿದ್ದರು? ಅನ್ಯಾಯ ಕೇಳಬೇಕಿತ್ತು. ಲೋಕಾಯುಕ್ತಕ್ಕೆ ದೂರು ನೀಡಬೇಕಿತ್ತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂಟ್ಯೂಬ್ ನಲ್ಲಿ ಚಿನ್ನಾಭರಣ ಪ್ರದರ್ಶಿಸಿದ ಮಹಿಳೆ: ಮರುಕ್ಷಣವೇ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಿಯೇ ಬಿಟ್ರು Video

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಿಜೆಪಿಗೆ ಸಹಾಯ ಮಾಡಿದ್ದು ಯಾರೆಂದು ಬಯಲು

ಛೀ.. ಇದೆಂಥಾ ಅಸಹ್ಯ: ರೈಲು ಕಿಟಿಕಿಯಿಂದ ಮೂತ್ರಿಸಿದ್ದಲ್ಲದೆ ಮಲಗಿದ ಯುವತಿಗೆ ಇದೇನು ಮಾಡಿದ ಭೂಪ Video

ನೆಹರೂ ದಾಖಲೆ ಮುರಿದು ದೀರ್ಘಾವಧಿ ಪ್ರಧಾನಿಯಾದ ಮೋದಿ

Karnataka Weather: ಕರ್ನಾಟಕದ ಈ ಜಿಲ್ಲೆಗೆ ಇಂದು ಭಾರೀ ಮಳೆ, ಹೈ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments