Webdunia - Bharat's app for daily news and videos

Install App

ಮೂಕಪ್ರಾಣಿಯ ಮೇಲೆ ಕಾರು ಹತ್ತಿಸಿ ಪರಾರಿಯಾದ ಭೂಪ ಅಂದರ್

Webdunia
ಸೋಮವಾರ, 9 ಜನವರಿ 2023 (14:36 IST)
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.ಮೂಕಪ್ರಾಣಿಯ ಮೇಲೆ ಕಾರು ಹತ್ತಿಸಿ ಭೂಪ ಪರಾರಿಯಾಗಿದ್ದಾನೆ.ಮುತ್ತುರಾಯನಗರದ ಸಪ್ತಗಿರಿ ರೆಸಿಡೆನ್ಸಿ ಮುಂಭಾಗದ ರಸ್ತೆಯಲ್ಲಿ ಮಲಗಿದ್ದ ಶ್ವಾನದ ಮೇಲೆ ಕಾರು ಹತ್ತಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಜನವರಿ 7 ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕಾರು ಮೈಮೇಲೆ ಹತ್ತುತ್ತಿದ್ದಂತೆ ನಡು ರಸ್ತೆಯಲ್ಲೇ ಚಡಪಡಿಸಿದ ಶ್ವಾನ, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.KA 05 MP 5836 ಎಂಬ ನಂಬರಿನ ಕಾರು ಇದ್ದಾಗಿದ್ದು,ಸ್ಥಳೀಯರಿಂದ ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮುತ್ತುರಾಯನಗರದ ಸಪ್ತಗಿರಿ ರೆಸಿಡೆನ್ಸಿ ಮುಂಭಾಗದ ರಸ್ತೆಯಲ್ಲಿ ಶ್ವಾನ ಮಲಗಿತ್ತು.ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸ್ತಿದ್ದಾರೆ.
 
ಸ್ಥಳೀಯರಿಂದ ಮಾಹಿತಿ ಪಡೆದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.KA 05 MP 5836 ಎಂಬ ನಂಬರಿನ ಕಾರು  ಚಾಲಕನಿಗೆ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ಮಾಹಿತಿ ರವಾನೆಯಾಗಿದೆ.ಇಂದು ನಾಯಿಗೆ ಪೋಸ್ಟ್ ಮಾರ್ಟಂ ಸಹಾ ಮಾಡಲಾಗುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

Terror Threat: ದಿಢೀರನೇ ಆಪರೇಷನ್ ಶಿವ ಆರಂಭಿಸಿ ಭದ್ರತಾ ಪಡೆ, ಕಾರಣ ಇಲ್ಲಿದೆ

Babban Singh Raghuvanshi: ಛೀ ಛೀ ಬಿಜೆಪಿ ಹಿರಿಯ ನಾಯಕನ ಇದೆಂಥಾ ನಡವಳಿಕೆ

ಮುಂದಿನ ಸುದ್ದಿ
Show comments