Webdunia - Bharat's app for daily news and videos

Install App

ಕೊಲೆ ಮಾಡಿ ಮೃತದೇಹದ ಜೊತೆ ಪೊಲೀಸ್ ಠಾಣೆಗೆ ಬಂದ ಭೂಪ

Webdunia
ಮಂಗಳವಾರ, 22 ನವೆಂಬರ್ 2022 (17:43 IST)
ವ್ಯಕ್ತಿಯನ್ನ ಕೊಲೆ ಮಾಡಿ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ  ಮೃತದೇಹವನ್ನ ಆರೋಪಿ ತಂದಿದ್ದ.ಮಹೇಶಪ್ಪ ಎಂಬಾತನನ್ನು ಕೊಂದು ತಂದಿದ್ದ ಆರೋಪಿಯಾಗಿದ್ದು,ರಾಜಶೇಖರ್ ಕೊಲೆ ಮಾಡಿ ಮೃತದೇಹದ ಸಹಿತ ಠಾಣೆಗೆ ಬಂದಿರುವ ವ್ಯಕ್ತಿಯಾಗಿದ್ದಾನೆ.
 
ನಂಜನಗೂಡು ಬಳಿಯ ಹಿಮನಗುಂಡಿ ಎಂಬ ಹಳ್ಳಿಯಿಂದ ಮಹೇಶಪ್ಪನನ್ನು ಬೆಂಗಳೂರಿಗೆ  ರಾಜಶೇಖರ ಕರೆತಂದಿದ್ದ.ಈ ಹಿಂದೆ ಮಹೇಶಪ್ಪ ರಾಮಮೂರ್ತಿ ನಗರದ ಜಯಂತಿ ನಗರದಲ್ಲಿ ವಾಸಿಸುತ್ತಿದ್ದ.ಈ ವೇಳೆ ರಾಜಶೇಖರನ ಜೊತೆ ಮಹೇಶಪ್ಪಗೆ ಒಳ್ಳೆ
ಸ್ನೇಹ ಇತ್ತು.ಬ್ಯಾಂಕ್ ಗಳಲ್ಲಿ ಲೋನ್ ಕೊಡಿಸುವುದಾಗಿ ಹಲವಾರು ಜನರಿಂದ ಹಣ ಪಡೆದಿದ್ದ ಮಹೇಶಪ್ಪ.ಈ ಎಲ್ಲಾ ವ್ಯವಹಾರಗಳಲ್ಲೂ ರಾಜಶೇಖರ ಮತ್ತು ಆತನ ತಾಯಿ ಸುವಿಧಾ ಜೊತೆಗಿದ್ದರು.ಆದರೆ ಯಾರಿಗೂ ಲೋನ್ ಕೊಡಿಸದೇ ಪಡೆದ ಹಣ ವಾಪಸ್ ನೀಡದೇ ಮಹೇಶಪ್ಪ ಎಸ್ಕೇಪ್ ಆಗಿದ್ದ .ಈ ಹಿನ್ನೆಲೆ ತನ್ನ ಮನೆಯನ್ನೇ ಮಾರಿ ಹಲವರಿಗೆ ಕೊಡಬೇಕಿದ್ದ ಹಣವನ್ನ ರಾಜಶೇಖರ ನೀಡಿದ್ದ .ಹೀಗಾಗಿ ರಾಜಶೇಖರ ಮಹೇಶಪ್ಪನ್ನನ್ನು ಹುಡುಕಿಕೊಂಡು ಹಳ್ಳಿಗೆ ಹೋಗಿದ್ದ.ಕಾರಿನಲ್ಲಿ ಕರೆತಂದು ಅವಲಹಳ್ಳಿ ಬಳಿ ಹಣ ವಾಪಸ್ ನೀಡುವಂತೆ  ರಾಡ್ ನಿಂದ ಹಲ್ಲೆ ಮಾಡಿದ್ದಾನೆ.
 
ಸುಮಾರು ಒಂದೂವರೆ ಕೋಟಿ ಹಣ ಕೊಡಬೇಕು ಎಂದು ಆರೋಪಿ ರಾಜಶೇಖರ ಹೇಳಿದ್ದು ,ಕಾರಿನಲ್ಲಿ ಹಲ್ಲೆ ಮಾಡಿದ ಬಳಿಕ ಬೆಳಗ್ಗೆ ತನಕ ಗಾಯಾಳುವನ್ನು ಆರೋಪಿ ಕಾರಿನಲ್ಲಿ ಇರಿಸಿಕೊಂಡಿದ್ದ.ಬೆಳಗ್ಗೆ ಎಚ್ಚರವಾಗಿ‌ ನೋಡಿದಾಗ ಮಹೇಶಪ್ಪ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.ಹೀಗಾಗಿ ಬೆಳಗಿನ ಜಾವ ಕಾರು,ಮೃತದೇಹ, ಹಲ್ಲೆ ಮಾಡಿದ್ದ ರಾಡ್ ಸಹಿತ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ  ರಾಜಶೇಖರ ಆಗಮಿಸಿದ್ದಾನೆ.ಸದ್ಯ ಕೇಸ್ ದಾಖಲಿಸಿ ರಾಜಶೇಖರನನ್ನು  ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments