ಮದುವೆಯಾಗುವುದಾಗಿ ನಂಬಿಸಿ ಸಿಐಎಸ್ಎಫ್ ಕಾನ್‌ಸ್ಟೆಬಲ್‌ಗೆ ₹18 ಲಕ್ಷ ಟೋಪಿ ಹಾಕಿದ ಭೂಪ

Sampriya
ಶುಕ್ರವಾರ, 31 ಜನವರಿ 2025 (15:00 IST)
Photo Courtesy X
ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್‌ಸ್ಟೆಬಲ್‌ನನ್ನು ಮದುವೆಯಾಗುವುದಾಗಿ ನಂಬಿಸಿ  18 ಲಕ್ಷ ರೂಪಾಯಿ ವಂಚಿಸಿದ ಘಟನೆ ಕುರಿತು ಬೆಂಗಳೂರಿನ ಪೊಲೀಸ್‌ ಠಾಣೆಯೊಂದರಲ್ಲಿ ದೂರು ನೀಡಲಾಗಿದೆ.

ಮಹಿಳಾ ಕಾನ್‌ಸ್ಟೆಬಲ್‌ ಅವರು ಮಹಿಳೆ ಮದುವೆಯಾಗಲು ಸಂಗಾತಿಗಾಗಿ ಹುಡುಕುತ್ತಿರುವಾಗ ಕನ್ನಡ ಮ್ಯಾಟ್ರಿಮೋನಿ ಸೈಟ್ ಮೂಲಕ ಆರೋಪಿ ಅಶೋಕ್ ಮಾಸ್ತಿ ಎಂಬಾತನೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ.

ತಾನು ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿದ್ದು, ಶೀಘ್ರದಲ್ಲೇ ಉದ್ಯೋಗ ಸಿಗಲಿದೆ ಎಂದು ಮಾಸ್ತಿ ಸಂತ್ರಸ್ತೆಗೆ ತಿಳಿಸಿದ್ದಾನೆ. ಬಳಿಕ ಆರೋಪಿ ಆಕೆಯ ನಿವಾಸಕ್ಕೂ ಭೇಟಿ ನೀಡಲು ಆರಂಭಿಸಿದ್ದಾನೆ.

ಆಕೆಯನ್ನು ಮದುವೆಯಾಗಲು ವರದಕ್ಷಿಣೆಯಾಗಿ ₹ 20 ಲಕ್ಷ ನೀಡುವಂತೆ ಮಾಸ್ತಿ ಬೇಡಿಕೆಯಿಟ್ಟಿದ್ದಾನೆ. ಸಂತ್ರಸ್ತೆ ಹಣವನ್ನು ಆತನಿಗೆ ವರ್ಗಾಯಿಸಿದ್ದಾರೆ. ಆದರೆ, ಹಣ ಪಡೆದ ಬಳಿಕ ಒಂದಲ್ಲ ಒಂದು ಕಾರಣ ನೀಡಿ ಆರೋಪಿ ಮದುವೆಯನ್ನು ಮುಂದೂಡುತ್ತಾ ಬಂದಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ಆತನನ್ನು ಪ್ರಶ್ನಿಸಿದಾಗ, ಆಕೆಯನ್ನು ಮದುವೆಯಾಗಲು ಮಾಸ್ತಿ ನಿರಾಕರಿಸಿದ್ದಾನೆ ಮತ್ತು ಆಕೆಯ ಕರೆಗಳಿಗೆ ಉತ್ತರಿಸುವುದನ್ನು ನಿಲ್ಲಿಸಿದ್ದಾನೆ. ಸಂತ್ರಸ್ತೆಯ ಜೊತೆ ಸಂಪರ್ಕದಲ್ಲಿದ್ದ ಆರೋಪಿಯ ಸಂಬಂಧಿಕರು ಕೂಡ ಮಾತು ನಿಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

ಮುಂದಿನ ಸುದ್ದಿ
Show comments