ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕನ್ನ ಹಾಕಿದ ಭೂಪರು

Webdunia
ಶನಿವಾರ, 9 ಮಾರ್ಚ್ 2019 (16:27 IST)
ಮುಖ್ಯಮಂತ್ರಿಗಳ ಜತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆ ನೀಡಿ ನೆರವಿಗಾಗಿ ಅರ್ಜಿ ಸಲ್ಲಿಸಿದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಫೆಬ್ರುವರಿ 20 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನದಲ್ಲಿ  ಚನ್ನಪ್ಪ ಹಾಗೂ ಸುನಂದಮ್ಮ ಎಂಬವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಒದಗಿಸುವಂತೆ ಮನವಿ ಸಲ್ಲಿಸಿದ್ದರು.

ಈ ಅರ್ಜಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಯ ಕಚೇರಿ ಸಿಬ್ಬಂದಿ ಪರಿಶೀಲಿಸಿದಾಗ ಅರ್ಜಿಯೊಂದಿಗೆ ಲಗತ್ತಿಸಿರುವ ಮಣಿಪಾಲ್ ಆಸ್ಪತ್ರೆಯ ವೈದ್ಯಕೀಯ ದಾಖಲೆಗಳು ಮೇಲ್ನೋಟಕ್ಕೇ ನಕಲಿ ಎಂದು ಕಂಡು ಬಂದ ಕಾರಣ, ದಾಖಲೆಗಳ ನೈಜತೆ ಪರಿಶೀಲಿಸುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿತ್ತು. ಅಲ್ಲದೆ, ಶಾಖೆಯ ಇಬ್ಬರು ಸಿಬ್ಬಂದಿಯ ತಂಡ ರಚಿಸಿ, ವರದಿ ನೀಡುವಂತೆ ಸೂಚಿಸಲಾಗಿತ್ತು. ಅದರಂತೆ ಸಿಬ್ಬಂದಿ ಫೆಬ್ರುವರಿ 26 ರಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ದಾಖಲೆಗಳು ನಕಲಿ ಎಂದು ಆಸ್ಪತ್ರೆಯ ಅಧಿಕಾರಿಗಳು ದೃಢೀಕರಿಸಿದ್ದರು. 
ಅಲ್ಲದೆ, ಈ ದಾಖಲೆಗಳಲ್ಲಿ ಸೂಚಿಸಲಾಗಿರುವ ಹೆಸರುಗಳೂ ಮತ್ತು ಆಸ್ಪತ್ರೆಯ ನೋಂದಣಿ ಸಂಖ್ಯೆಗಳಿಗೂ ಹೊಂದಾಣಿಕೆಯಾಗುತ್ತಿಲ್ಲ. ಬಿಲ್ಲುಗಳಲ್ಲಿ ನಮೂದಿಸಲಾಗಿರುವ ಹೆಸರಿನ ವೈದ್ಯರು ಯಾರೂ ಅಲ್ಲಿ ಸೇವೆ ಸಲ್ಲಿಸುತ್ತಿಲ್ಲ ಎಂದು ಆಸ್ಪತ್ರೆಯು ತನ್ನ ಪತ್ರದಲ್ಲಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಯವರು ಹಾಗೂ ಮುಖ್ಯ ಕಾರ್ಯದರ್ಶಿಗಳ ಸೂಚನೆಯ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಹಾವೇರಿ: ನೀಡದ ಬೆಡ್‌, ಕಾರಿಡಾರ್‌ನಲ್ಲೇ ಹೆರಿಗೆ, ನೆಲಕ್ಕೆ ಬಿದ್ದು ಶಿಶು ಸಾವು

ಪತ್ನಿ ಪಾರ್ವತಿ ಆರೋಗ್ಯ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments