Select Your Language

Notifications

webdunia
webdunia
webdunia
webdunia

ಬೈಎಲೆಕ್ಷನ್ ದಿನಾಂಕ ಮರುನಿಗದಿ; ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್-ಜೆಡಿಎಸ್

ಬೈಎಲೆಕ್ಷನ್  ದಿನಾಂಕ ಮರುನಿಗದಿ; ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್-ಜೆಡಿಎಸ್
ಬೆಂಗಳೂರು , ಶನಿವಾರ, 28 ಸೆಪ್ಟಂಬರ್ 2019 (11:06 IST)
ಬೆಂಗಳೂರು : 15 ಕ್ಷೇತ್ರಗಳ ಬೈಎಲೆಕ್ಷನ್ ಗೆ ದಿನಾಂಕ ಮುಂದೂಡಿದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಕಿಡಿಕಾರಿದ್ದಾರೆ.



ರಾಜ್ಯದ 15 ಕ್ಷೇತ್ರಗಳ ಬೈಎಲೆಕ್ಷನ್ ಗೆ ಮುಹೂರ್ತ ಫಿಕ್ಸ್ ಆಗಿದ್ದರೂ ಇದೀಗ 24 ಗಂಟೆ ಕಳೆಯುವ ಮುನ್ನವೇ ಹೊಸದೊಂದು ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.ಈ ಬಗ್ಗೆ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ ಕಾರ್ಯ ನಿರ್ವಹಿಸುವುದರ ಹಿಂದಿನ ಮರ್ಮವೇನು? ಇಂತಹ ಗೊಂದಲದ ಚುನಾವಣೆ ಎಂದೂ ಘೋಷಣೆಯಾಗಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರೆ, ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ಕಾರಣಕ್ಕೂ ವಿಜಯನಗರವನ್ನು ಜಿಲ್ಲೆ ಎಂದು ಘೋಷಣೆ ಮಾಡಬಾರದು- ಶಾಸಕ ಸೋಮಶೇಖರ ರೆಡ್ಡಿ