ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

Sampriya
ಗುರುವಾರ, 28 ಆಗಸ್ಟ್ 2025 (15:26 IST)
ಬೀದರ್‌: ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡಿರುವ ಡಿಪೋ–1ರಲ್ಲಿ ನಿಲ್ಲಿಸಿದ್ದ ಸ್ಲೀಪರ್‌ ಕೋಚ್‌ ಬಸ್‌ನಲ್ಲಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 

ಆತ್ಮಹತ್ಯೆಗೆ ಶರಣಾದ ಚಾಲಕರನ್ನು ಬೀದರ್‌ ತಾಲ್ಲೂಕಿನ ಆಣದೂರ ಗ್ರಾಮದ ರಾಜಕುಮಾರ (59) ಎಂದು ಗುರುತಿಸಲಾಗಿದೆ. 

ಬೀದರ್‌ ಟು ಬಳ್ಳಾರಿ ಸ್ಲೀಪರ್‌ ಕೋಚ್‌ ಬಸ್‌ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಬುಧವಾರ ರಾತ್ರಿ ಡಿಪೋ–1ರಲ್ಲಿ ನಿಲ್ಲಿಸಿದ್ದ ಬಸ್ಸಿನೊಳಗೆ ರಾಜಕುಮಾರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಐದು ತಿಂಗಳಲ್ಲಿ ಅವರು ಕೆಲಸದಿಂದ ನಿವೃತ್ತರಾಗುವವರಿದ್ದರು. ಅವರ ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಇನ್ನಷ್ಟೇ ಆತ್ಮಹತ್ಯೆಗೆ ಕಾರಣ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀದರ್‌ನ ನೂತನ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 

ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ರಾಜಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಕೆಎಸ್‌ಆರ್‌ಟಿಸಿ ನೌಕರರ ಜಂಟಿ ಹೋರಾಟ ಸಮಿತಿ ಆಗ್ರಹಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments