Select Your Language

Notifications

webdunia
webdunia
webdunia
webdunia

Big Breaking:ಹತ್ತಿರದಿಂದ ಕೊಹ್ಲಿ ನೋಡುವ ಖುಷಿಯಲ್ಲಿದ್ದ ಆರ್‌ಸಿಬಿ ಫ್ಯಾನ್ಸ್‌ ಬಿಗ್‌ಶಾಕ್‌

ಆರ್‌ಸಿಬಿ ವಿಜೇತ ಮೆರವಣಿಗೆ

Sampriya

ಬೆಂಗಳೂರು , ಬುಧವಾರ, 4 ಜೂನ್ 2025 (13:50 IST)
Photo Credit X
ಬೆಂಗಳೂರು: ಮುಂಜಾಗೃತ ಹಿನ್ನೆಲೆ ತೆರೆದ ಬಸ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ಇಲ್ಲ. ಆರ್‌ಸಿಬಿ ಆಟಗಾರರು ಬಸ್ಸಿನಲ್ಲಿ ಬಂದು ಬಸ್ಸಿನಲ್ಲಿ ಹೋಗುತ್ತಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಕೊಹ್ಲಿ ಹಾಗೂ ಆರ್ಸಿಬಿ ಆಟಗಾರರನ್ನು ಹತ್ತಿರದಿಂದ ನೋಡಬೇಕೆಂದು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. 

ವಿಧಾನಸೌಧದಲ್ಲಿ ಸಂಜೆ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಗ್ರ‍್ಯಾಂಡ್ ಸ್ಟೆಪ್ ಬಳಿ ಸಿದ್ಧತೆ ವೀಕ್ಷಣೆ ಮಾಡಿದ ಬಳಿಕ ಪರಮೇಶ್ವರ್ ಮಾಧ್ಯಮಗಳೊಂದಿಗೆ ಮಾತನಾಡಿದರು. 
ಗೃಹ ಇಲಾಖೆ ಒಪ್ಪದ ಕಾರಣ ಪರೇಡ್‌ಗೆ ಬ್ರೇಕ್ ಹಾಕಲಾಗಿದೆ. ಪೊಲೀಸ್ ಕಮೀಷನರ್ ಪರೇಡ್‌ಗೆ ಒಪ್ಪಿಲ್ಲ. ವಿಧಾನಸೌಧ ಹಾಗೂ ಹೈಕೋರ್ಟ್ ಭದ್ರತೆ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. 


ವಿಕ್ಟರಿ ಪರೇಡ್‌ಗೆ ಲಕ್ಷಾಂತರ ಜನರು ಸೇರುವುದರಿಂದ ನಿರ್ವಹಣೆ ಕಷ್ಟ. ನಗರದ ಹೃದಯ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ಆಗಲಿದೆ. ವಿಧಾನಸೌಧ, ಹೈಕೋರ್ಟ್ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳಿವೆ. ಆದ್ದರಿಂದ ಸೂಕ್ತ ಭದ್ರತೆ ಕಷ್ಟ ಎಂದು ಪೊಲೀಸ್ ಇಲಾಖೆ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷವೂ ಇರಬಹುದು, 10ವರ್ಷಗಳೂ ಇರಬಹುದು: ಸಚಿವ ಕೆಜೆ ಜಾರ್ಜ್‌