Publish Date: Tue, 09 Jun 2026 (10:34 IST)
Updated Date: Tue, 09 Jun 2026 (10:37 IST)
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ತರಲಾಗಿದೆ. ಇನ್ನು ಮುಂದೆ ಹೀಗೆ ಮಾಡಿಲ್ಲ ಎಂದರೆ ನಿಮಗೆ ಹಣ ಬರದು.
ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದುದು. ಈ ಯೋಜನೆಯಡಿಯಲ್ಲಿ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಸಂದಾಯ ಮಾಡಲಾಗುತ್ತದೆ. ಆದರೆ ಈ ಯೋಜನೆಯ ದುರುಪಯೋಗ ಪಡೆಯಲು ಸರ್ಕಾರದ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಮುಂದಿನ ತಿಂಗಳು ಬಯೋಮೆಟ್ರಿಕ್ ಮಾಡಿಸಿಕೊಳ್ಳಬೇಕು. ಒಂದು ವೇಳೆ ನೀವು ಬಯೋಮೆಟ್ರಿಕ್ ಮಾಡಿಸಿಕೊಳ್ಳದೇ ಇದ್ದರೆ ಮುಂದಿನ ತಿಂಗಳು ಫಲಾನುಭವಿಗಳ ಖಾತೆಗೆ ಹಣ ಬರಲ್ಲ.
ಬಯೋಮೆಟ್ರಿಕ್ ಮಾಡಿಸಿಕೊಳ್ಳಲು 5 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಗೃಹಲಕ್ಷ್ಮಿ ಬಯೋಮೆಟ್ರಿಕ್ ಗಾಗಿ ಆಪ್ ಸಿದ್ಧಪಡಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದಲೇ ಬಯೋಮೆಟ್ರಿಕ್ ಮಾಡಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ