DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Krishnaveni K
ಸೋಮವಾರ, 21 ಏಪ್ರಿಲ್ 2025 (08:53 IST)
Photo Credit: X
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯಗಳಿಗೆ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು, ಇದರ ಹಿಂದೆ ಭಾರೀ ಲೆಕ್ಕಾಚಾರವಿದೆ. ಡಿಕೆಶಿ ಇತ್ತೀಚೆಗಿನ ಹಿಂದುತ್ವ ನಿಲುವು ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸಿದೆ.

ಡಿಕೆ ಶಿವಕುಮಾರ್ ಕುಂಭಮೇಳ ಮಹಾಸ್ನಾನದಿಂದ ಹಿಡಿದು ನಿನ್ನೆಯ ಧರ್ಮಸ್ಥಳ ಭೇಟಿವರೆಗೆ ಇತ್ತೀಚೆಗೆ ತಾನು ಅಪ್ಪಟ ಹಿಂದೂ, ಧರ್ಮ, ದೇವರ ಮೇಲೆ ನನಗೆ ಅಪಾರ ಶ್ರದ್ಧೆಯಿದೆ ಎಂದು ತೋರಿಸಿಕೊಡುತ್ತಿದ್ದಾರೆ. ಇದರ ಹಿಂದೆ ರಾಜಕೀಯ ಲೆಕ್ಕಾಚಾರವೂ ಇದೆ ಎನ್ನಲಾಗುತ್ತಿದೆ.

ವಿಶೇಷವಾಗಿ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಹಿಂದೂಗಳ ಬೆಂಬಲವಿಲ್ಲದೇ ಗೆಲ್ಲುವುದು ಸಾಧ್ಯವಿಲ್ಲ. ಈ ಕಡೆ ದೈವ-ದೇವರ ಬಗ್ಗೆ ಅಪಾರ ಶ್ರದ್ಧಾ-ಭಕ್ತಿಯಿದೆ. ಹೀಗಾಗಿಯೇ ಇಷ್ಟು ದಿನವೂ ಇಲ್ಲಿ ಬಿಜೆಪಿ ಗಟ್ಟಿಯಾಗಿ ನೆಲಯೂರಿದೆ. ಈಗ ಡಿಕೆಶಿ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಸಾಫ್ಟ್ ಹಿಂದುತ್ವದ ಸಂದೇಶ ಸಾರುತ್ತಿದ್ದು, ಇಲ್ಲಿನ ಜನರ ಮನಸ್ಸು ಗೆಲ್ಲುವ ಪ್ರಯತ್ನ ಮಾಡಿದ್ದಾರೆ. ಇದು ಬಿಜೆಪಿಗೆ ಒಳಗೊಳಗೇ ಆತಂಕ ತರುವುದು ಖಂಡಿತಾ.

ಅಷ್ಟಕ್ಕೂ ಕರಾವಳಿ ಭಾಗದವರ ಮನಸ್ಸು ಗೆಲ್ಲುವುದು ಅಷ್ಟು ಸುಲಭವಲ್ಲ. ಇಲ್ಲಿನ ಜನರ ನಂಬಿಕೆ ಗಳಿಸಬೇಕೆಂದರೆ ಯಾವುದು ಉತ್ತಮ ದಾರಿ ಎಂಬುದನ್ನು ಡಿಕೆಶಿ ಅರಿತುಕೊಂಡಂತಿದೆ. ಹೀಗಾಗಿಯೇ ಅವರ ಟೆಂಪಲ್ ರನ್ ಪ್ರಾಮುಖ್ಯತೆ ಪಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸರಿ ಧ್ವಜ ಹಿಡಿದು ಮೆರವಣಿಗೆಗೆ ಚಾಲನೆ: ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾದ ಉಡುಪಿ ಜಿಲ್ಲಾಧಿಕಾರಿ

ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು: ಸಿ.ಟಿ. ರವಿ ವಾಗ್ದಾಳಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ರೀಲ್ಸ್ ಗಾಗಿ ಇದೆಂಥಾ ಶೋಕಿ: ಟ್ರಕ್ ನಡಿಯಲ್ಲಿ ಬೈಕ್ ಚಾಲನೆ ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments